ಕೊನೆಗೂ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ –  ಏರ್ ಪೋರ್ಟ್‍ನಲ್ಲೇ ಲಾಕ್ ಆಗ್ತಾರಾ?

ಕೊನೆಗೂ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ –  ಏರ್ ಪೋರ್ಟ್‍ನಲ್ಲೇ ಲಾಕ್ ಆಗ್ತಾರಾ?

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರಲು ಮುಹೂರ್ತ ಫಿಕ್ಸ್‌ ಆಗಿದೆ. ಮೇ. 31 ರಂದು ಭಾರತಕ್ಕೆ ಬರುವುದಾಗಿ ಪ್ರಜ್ವಲ್‌ ರೇವಣ್ಣ ಹೇಳಿದ್ದು ವಿಮಾನ ಟಿಕೆಟ್‌ ಬುಕ್‌ ಮಾಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಗಗನಕ್ಕೇರಿದ ತರಕಾರಿ ಬೆಲೆ – ಬೆಳ್ಳುಳ್ಳಿ, ಬೀನ್ಸ್‌ ಬಲು ದುಬಾರಿ!

ಪ್ರಜ್ವಲ್‌ ರೇವಣ್ಣ  ಮ್ಯೂನಿಕ್‍ನಿಂದ ಬೆಂಗಳೂರಿಗೆ ಬರಲು ಲುಫ್ತಾನ್ಸಾ ಏರ್‌ಲೈನ್ಸ್ ಬುಕ್ ಮಾಡಿದ್ದಾರೆ. ಮೇ 31ರ ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿಗೆ ಬರ್ತಿದ್ದಂತೆ ಏರ್ ಪೋರ್ಟ್‍ನಲ್ಲೇ ಲಾಕ್ ಆಗುವ ಸಾಧ್ಯತೆಗಳಿವೆ. ಎಸ್‍ಐಟಿ ಅಧಿಕಾರಿಗಳು ಏರ್‍ಪೋರ್ಟ್‍ನಲ್ಲಿ ಬಂಧಿಸಲು ಸಜ್ಜಾಗಿದ್ದಾರೆ.

ಮೇ 31ರ ಮಧ್ಯರಾತ್ರಿಯೇ ಪ್ರಜ್ವಲ್ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಜರ್ಮನಿಯಿಂದ ಬರುವ ಲುಪ್ತಾನ್ಸಾ ಫ್ಲೈಟ್​ ಮೇಲೆ ಎಸ್‌ಐಟಿ ಅಧಿಕಾರಿಗಳು ಹದ್ದಿನ ಕಣ್ಣು ಇಟ್ಟಿದ್ದಾರೆ.

ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಸೋಮವಾರವಷ್ಟೇ ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ಅದರಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್‌ಐಟಿ (SIT) ಮುಂದೆ ಹಾಜರಾಗಿ ಉತ್ತರ ನೀಡುತ್ತೇನೆ. ಅಷ್ಟೇ ಅಲ್ಲದೇ ಕುಟುಂಬಸ್ಥರು ಮತ್ತು ರಾಜ್ಯದ ಜನತೆಯಲ್ಲಿ ಪ್ರಜ್ವಲ್‌ ರೇವಣ್ಣ ಕ್ಷಮೆ ಕೇಳಿದ್ದರು.

Shwetha M