ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಡಿಕೆಶಿಗೆ ಮತ್ತೊಂದು ಶಾಕ್ – ಶಿವಕುಮಾರ್ ವಿರುದ್ಧ ಎಫ್ ಐಆರ್!

ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಡಿಕೆಶಿಗೆ ಮತ್ತೊಂದು ಶಾಕ್ – ಶಿವಕುಮಾರ್ ವಿರುದ್ಧ ಎಫ್ ಐಆರ್!

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಕಾಂಗ್ರೆಸ್ ಪಕ್ಷ ಈಗಾಗಲೇ ಮೊದಲ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಎರಡನೇ ಲಿಸ್ಟ್ ರಿಲೀಸ್ ಮಾಡಲು ತಯಾರಿ ನಡೆಸಿದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಚುನಾವಣಾ ಹೊಸ್ತಿಲಲ್ಲಿಯೇ ಎಫ್ ಐಆರ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ : ಬಿ.ವೈ ವಿಜಯೇಂದ್ರ ಕ್ಷೇತ್ರ ಕೊನೆಗೂ ಫೈನಲ್ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ ಗೊತ್ತಾ?

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಧಾನಸಭಾ ಚುನಾವಣೆಗಾಗಿ ಈಗಾಗಲೇ ಸಾಕಷ್ಟು ರಣತಂತ್ರಗಳನ್ನ ರೂಪಿಸಿದ್ದಾರೆ. ಮುಖ್ಯಮಂತ್ರಿ ಸೀಟ್ ಮೇಲೆ ಕಣ್ಣಿಟ್ಟಿರುವ ಕನಕಪುರದ ಬಂಡೆ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರಲು ನಾನಾ ಪ್ಲ್ಯಾನ್ ಮಾಡುತ್ತಿದ್ದಾರೆ. ಆದರೆ ಪ್ರಜಾಧ್ವನಿ ಯಾತ್ರೆ (congress praja dhwani yatra) ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK SHivakumar)​ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿ.ಕೆ ಶಿವಕುಮಾರ್​​ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ (Mandya Rural Police Station) ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 u/s 17 E ಆರ್​ಪಿ ಆಕ್ಟ್ ಪ್ರಕಾರ ಎಫ್​ಐಆರ್​ ದಾಖಲಾಗಿದೆ. ಚುನಾವಣಾ ಸೆಕ್ಟರ್ ಅಧಿಕಾರಿಯಿಂದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಲಾಗಿತ್ತು. ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದ್ದು, ಅದರಂತೆ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಬೇವಿನಹಳ್ಳಿ ಗ್ರಾಮದಲ್ಲಿ ಮಾರ್ಚ್ 28ರಂದು ಪ್ರಜಾಧ್ವನಿ ಯಾತ್ರೆ ಕೈಗೊಂಡಿದ್ದರು. ಆ ವೇಳೆ ಬಸ್​ ಮೇಲಿಂದ ಡಿಕೆಶಿ ಕಲಾವಿದರತ್ತ 500 ರೂ. ನೋಟುಗಳನ್ನು ಎಸೆದಿದ್ದರು. ಬಳಿಕ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಸೆಕ್ಟರ್ ಆಫೀಸರ್​ ದೂರು ನೀಡಿದ್ದರು. ಇದೀಗ ನ್ಯಾಯಾಲಯದ ಆದೇಶದಂತೆ ನಿನ್ನೆ(ಏಪ್ರಿಲ್ 03) ಡಿಕೆ ಶಿವಕುಮಾರ್​ ವಿರುದ್ದ ಎಫ್‌ಐ‌ಆರ್ ದಾಖಲಾಗಿದ್ದು, ಈ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅವರಿಗೆ ಮೊದಲ ಸಂಕಷ್ಟ ಎದುರಾಗಿದೆ.

suddiyaana