ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿನ ದಾಳಿ – ಆರ್‌ಪಿಎಫ್ ಎಎಸ್ ಐ ಸೇರಿ ನಾಲ್ವರು ಸಾವು

ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿನ ದಾಳಿ – ಆರ್‌ಪಿಎಫ್ ಎಎಸ್ ಐ ಸೇರಿ ನಾಲ್ವರು ಸಾವು

ಜೈಪುರ: ಚಲಿಸುತ್ತಿದ್ದ ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ ಪೇದೆ ಗುಂಡು ಹಾರಿಸಿದ್ದು, ಆರ್‌ಪಿಎಫ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಬಳಿ ನಡೆದಿದೆ.

ಸೋಮವಾರ ಬೆಳಗ್ಗಿನ ಜಾವ ಜೈಪುರದಿಂದ ಮುಂಬೈಗೆ ರೈಲು ಚಲಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಆರ್‌ಪಿಎಫ್ ಪೇದೆ ಸಬ್ ಇನ್ಸ್ಪೆಕ್ಟರ್ ಜೊತೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದಾನೆ. ಈ ವೇಳೆ ರೈಲಿನಲ್ಲಿದ್ದ ಕೆಲ ಪ್ರಯಾಣಿಕರು ಅವರಿಬ್ಬರ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೇದೆ ಕೋಪಗೊಂಡ ಪೇದೆ, ಸಬ್ ಇನ್ಸ್ಪೆಕ್ಟರ್ ಸೇರಿ ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಮತ್ತೆ ಟೊಮ್ಯಾಟೋ ದರ ಭಾರಿ ಏರಿಕೆ – ಟೊಮ್ಯಾಟೋ ಬೆಲೆ ಕೆಜಿಗೆ 200 ರೂ.!

ಆರೋಪಿ ಆರ್‌ಪಿಎಫ್ ಪೇದೆಯನ್ನು ಚೇತನ್ ಸಿಂಗ್ ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಚೇತನ್ ಸಿಂಗ್ ರೈಲಿನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬೋರಿವಲಿ ನಿಲ್ದಾಣದಲ್ಲಿ ಮೃತಪಟ್ಟ ನಾಲ್ವರ ಮೃತದೇಹವನ್ನು ರೈಲಿನಿಂದ ಹೊರತೆಗೆಯಲಾಗಿದ್ದು, ಕಾಂದಿವಲಿಯ ಬಾಬಾಸಾಹೇಬ್‌ ಅಂಬೇಡ್ಕರ್‌ ಆಸ್ಪತ್ರೆಗೆ ರವಾನಿಸಲಾಗಿದೆ.

suddiyaana