ರಾಜ್ಯ ಸ‌ರ್ಕಾರದಿಂದ ರೈತರಿಗೆ ಗುಡ್‌ ನ್ಯೂಸ್‌ – ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್‌!

ರಾಜ್ಯ ಸ‌ರ್ಕಾರದಿಂದ ರೈತರಿಗೆ ಗುಡ್‌ ನ್ಯೂಸ್‌ – ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್‌!

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಮಳೆ ಕೊರತೆ ಉಂಟಾಗಿದ್ದು, ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಜಲಾಶಯಗಳಲ್ಲಿ ನೀರಿನ ಕೊರತೆ ಇರುವುದರಿಂದಾಗಿ ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ರೈತರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಇಂದಿನಿಂದ ( ಸೋಮವಾರ) ರೈತರ ಪಂಪ್​ಸೆಟ್​ಗಳಿಗೆ 7 ತಾಸು ವಿದ್ಯುತ್ ಪೂರೈಸಲಾಗುವುದು ಎಂದು ಘೋಷಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು, ಬಳ್ಳಾರಿ ಥರ್ಮಲ್​ ಘಟಕದಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತೆ. ಅದು ಈಗ ಒಂದು‌ ಸಾವಿರ ಮೆಗಾ ವ್ಯಾಟ್ ಉತ್ಪತ್ತಿ ಆಗುತ್ತಿದೆ. ಮೂರು ಸಾವಿರದ ಇನ್ನೂರು ಮೆಗಾ ವ್ಯಾಟ್ ಉತ್ಪಾದನೆ ಹೆಚ್ಚು ಮಾಡಿದ್ದೇವೆ. ರಾಜ್ಯದ ವಿದ್ಯುತ್ ಬೇರೆಯವರಿಗೆ ಕೊಡಬಾರದು ಅಂತ ತೀರ್ಮಾನಿಸಿದ್ದೇವೆ ಎಂದರು.

ಇದನ್ನೂ ಓದಿ: ಜನರ ಸಂಕಟ ಕೇಳುವವರಿಲ್ಲ..  ಸಿದ್ದರಾಮಯ್ಯ ಸರ್ಕಾರಕ್ಕೆ ಕುರ್ಚಿಯೇ ಎಲ್ಲಾ!! – ಕಾಂಗ್ರೆಸ್‌ ವಿರುದ್ಧ ಬಿಜೆಪಿ ಲೇವಡಿ!

ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಜೊತೆ ಪರಿಶೀಲನೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂಧನ ಇಲಾಖೆ ಜೊತೆ ಪರಿಶೀಲನಾ ಸಭೆ ನಡೆಸಿದ್ದೇವೆ. ಮೂರು ವಾರಗಳ ಹಿಂದೆ ಇದೇ ಇಲಾಖೆ ಜೊತೆ ಸಭೆ ಮಾಡಿ ಶಾರ್ಟೇಜ್‌ ಇದೆ ಅಂತೇಳಿ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ನೀಡುವುದಾಗಿ ಹೇಳಿದ್ದೆವು. ಕೆಲವು ಜನ ನಿರಂತರವಾಗಿ 5 ಗಂಟೆ ವಿದ್ಯುತ್ ಕೊಟ್ರೆ ಸಾಕು ಅಂದಿದ್ದರು. ಆಗ 3 ಪೇಸ್ 5 ಗಂಟೆ ವಿದ್ಯುತ್ ನೀಡುವಂತೆ ಸೂಚನೆ ಕೊಟ್ಟಿದ್ದೆ. ರಾಯಚೂರು, ಕೊಪ್ಪಳ, ಯಾದಗಿರಿ ಜನರು ಭೇಟಿ ಮಾಡಿ‌ 7 ಗಂಟೆ ವಿದ್ಯುತ್ ಕೊಡ್ಬೇಕು ಅಂದ್ರು. ಈ ಭಾಗದಲ್ಲಿ 7 ಗಂಟೆ ಕೊಡ್ಬೇಕು ಅಂತ‌ ಅಧಿಕಾರಿಗಳಿಗೆ ಹೇಳಿದ್ದೆ. ಭತ್ತ, ಕಬ್ಬು ಬೆಳೆಗಾರರಿಗೆ 7 ಗಂಟೆ ಕೊಡ್ಬೇಕು‌ ಅಂತ ಹೇಳಿದ್ದೆ ಎಂದರು.

ರಾಯಚೂರು, ಬಳ್ಳಾರಿ‌ನಲ್ಲಿ ಥರ್ಮಲ್ ಪವರ್ ಉತ್ಫಾದನೆ ಆಗುತ್ತೆ. ಅದು ಈಗ ಒಂದು‌ ಸಾವಿರ ಮೆಗಾ ವ್ಯಾಟ್ ಉತ್ಪತ್ತಿ ಆಗುತ್ತಿದೆ. ಮೂರು ಸಾವಿರದ ಇನ್ನೂರು ಮೆಗಾ ವ್ಯಾಟ್ ಉತ್ಪಾದನೆ ಹೆಚ್ಚು ಮಾಡಿದ್ದೇವೆ. ರಾಜ್ಯದ ವಿದ್ಯುತ್ ಬೇರೆಯವರಿಗೆ ಕೊಡಬಾರದು. ಇವತ್ತಿನಿಂದ 7 ತಾಸು ವಿದ್ಯುತ್ ಪಂಪ್‌ ಸೆಟ್ ಗಳಿಗೆ ಕೊಡ್ತೇವೆ ಎಂದರು.

Shwetha M