ತಿಮ್ಮಪ್ಪನ ಭಕ್ತರಿಗೆ ಗುಡ್‌ನ್ಯೂಸ್ – ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಬಾಲಾಜಿ ದರ್ಶನಕ್ಕೆ ಸಿಗಲಿದೆ ಹೆಚ್ಚುವರಿ ಟಿಕೆಟ್‌!

ತಿಮ್ಮಪ್ಪನ ಭಕ್ತರಿಗೆ ಗುಡ್‌ನ್ಯೂಸ್ – ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಬಾಲಾಜಿ ದರ್ಶನಕ್ಕೆ ಸಿಗಲಿದೆ ಹೆಚ್ಚುವರಿ ಟಿಕೆಟ್‌!

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮಹತ್ವದ ಸುದ್ದಿಯೊಂದಿದೆ. ತಿಮ್ಮಪ್ಪನ ದರ್ಶನದ ವಿಚಾರವಾಗಿ ಟಿಟಿಡಿ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚುವರಿಯಾಗಿ 4 ಸಾವಿರ ದರ್ಶನ ಟಿಕೆಟ್ ಬಿಡುಗಡೆ ಮಾಡಲು ಟಿಟಿಡಿ ನಿರ್ಧರಿಸಿದೆ.

ಟಿಟಿಡಿ ಇಒ ಎ.ವಿ.ಧರ್ಮ ರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿಗೆ ಹೆಚ್ಚುವರಿಯಾಗಿ 4 ಸಾವಿರ ದರ್ಶನ ಟಿಕೆಟ್ ಬಿಡುಗಡೆ ಮಾಡಲಾಗುವುದು. ತಿಮ್ಮಪ್ಪನ ಭಕ್ತರ ಅನುಕೂಲಕ್ಕಾಗಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿಗೆ ದಿನಕ್ಕೆ 300 ರೂಪಾಯಿಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಶೀಘ್ರದಲ್ಲೇ ವಿತರಿಸಲಾಗುವುದು. ಟಿಟಿಡಿ ಅಧಿಕೃತ ವೆಬ್​​ಸೈಟ್​ಗೆ ಭೇಟಿ ನೀಡಿ ಟಿಕೆಟ್​ ಬುಕ್ ಮಾಡಿಕೊಳ್ಳಬಹುದು, ಈ ಕುರಿತ ಅಧಿಕೃತ ದಿನಾಂಕ ಘೋಷಣೆ ಮಾಡಲಿದ್ದೇವೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ದಾಂಪತ್ಯಕ್ಕೆ 45 ವರ್ಷ – ತಮ್ಮದೇ ಆಭರಣಗಳಿಂದ ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ ಮಾಡಿಸಿಕೊಟ್ಟ ಸುಧಾಮೂರ್ತಿ ದಂಪತಿ

ದಿನ ನಿತ್ಯ ಸಾವಿರಾರು ಭಕ್ತರು ದೇಗುಲಕ್ಕೆ ಆಗಮಿಸಿ, ತಿಮ್ಮಪ್ಪನ ದರ್ಶನ ಪಡೆಯುತ್ತಿದ್ದಾರೆ. ಹೀಗಾಗಿ ಪಾದಚಾರಿ ಮಾರ್ಗಗಳಲ್ಲಿ ಭಕ್ತರ ಸುರಕ್ಷತೆ ಅಗತ್ಯ ಕ್ರಮಕೈಗೊಳ್ಳಲಾಗುವುದು. ಬೇಸಿಗೆ ಸೀಸನ್‌ ಮುಗಿದಿರುವುದರಿಂದ ಭಕ್ತರು ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಬರುತ್ತಿದ್ದು, ಹೆಚ್ಚುವರಿಯಾಗಿ 300 ರೂಪಾಯಿ ವಿಶೇಷ ಪ್ರವೇಶ ಟಿಕೆಟ್‌ ನೀಡಲಿದ್ದಾರೆ. ದಿನಕ್ಕೆ 20,000 ಟಿಕೆಟ್‌ಗಳನ್ನು ಈಗಾಗಲೇ ನಿಗದಿಪಡಿಸಲಾಗಿದೆ. ತಿರುಮಲ ನಡೆದುಕೊಂಡು ಹೋಗುವ ದಾರಿಯಲ್ಲಿ ಬಾಲಕ ಕೌಶಿಕ್ ಎಂಬುವವರ ಮೇಲೆ ಚಿರತೆ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಹಲವು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಒ ತಿಳಿಸಿದ್ದಾರೆ.

ಇನ್ನು ಸಂಜೆ 7ರ ನಂತರ ಗಾಳಿಗೋಪುರದಿಂದ ಅಲಿಪಿರಿ ನಡಿಗೆ ಮಾರ್ಗದ ಮೊಣಕಾಲು ಮೆಟ್ಟಿಲುವರೆಗೆ ಭಕ್ತರನ್ನು ಗುಂಪು ಗುಂಪಾಗಿ ಕಳುಹಿಸಲು ವ್ಯವಸ್ಥೆ ಮಾಡಲಾಗಿತ್ತು. ಶ್ರೀವಾರಿ ಮೆಟ್ಟು ಮಾರ್ಗದಲ್ಲಿ ಸಂಜೆ 6ರವರೆಗೆ ಹಾಗೂ ಅಲಿಪಿರಿ ಮಾರ್ಗದಲ್ಲಿ ರಾತ್ರಿ 10ರವರೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

suddiyaana