ಸಂಸದ ಪ್ರತಾಪ್ ಸಿಂಹ ಬೆದರಿಕೆ- ಬಸ್ ಶೆಲ್ಟರ್ ಮೇಲೆ ಬಂತು ಕಳಶ..!
ಗುಂಬಜ್ ವಿರುದ್ಧ ಪ್ರತಾಪ್ ಸಿಂಹ ಮಾಡಿದ ಭಾಷಣದ ಎಫೆಕ್ಟ್..!

ಸಂಸದ ಪ್ರತಾಪ್ ಸಿಂಹ ಬೆದರಿಕೆ- ಬಸ್ ಶೆಲ್ಟರ್ ಮೇಲೆ ಬಂತು ಕಳಶ..!ಗುಂಬಜ್ ವಿರುದ್ಧ ಪ್ರತಾಪ್ ಸಿಂಹ ಮಾಡಿದ ಭಾಷಣದ ಎಫೆಕ್ಟ್..!

ಮೈಸೂರಿನಲ್ಲಿ ಗುಂಬಜ್ ಮಾದರಿಯ ಬಸ್ ಶೆಲ್ಟರ್ ವಿಚಾರ ವಿವಾದ ಸೃಷ್ಟಿಸಿದೆ. ಮೈಸೂರು-ನಂಜನಗೂಡು  ರಸ್ತೆಯಲ್ಲಿರುವ ಬಸ್ ಶೆಲ್ಟರ್ ಮೇಲೆ ಗುಂಬಜ್ ಆಕೃತಿಗಳನ್ನ ನಿರ್ಮಿಸಲಾಗಿತ್ತು. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಗುಂಬಜ್ ಮಾದರಿಯಲ್ಲಿ ಬಸ್​ ನಿಲ್ದಾಣ ನಿರ್ಮಿಸುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನ.13ರಂದು ಮೈಸೂರಿನ ರಂಗಾಯಣದಲ್ಲಿ ಟಿಪ್ಪು ನಿಜ ಕನಸುಗಳು ನಾಟಕದ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿತ್ತು. ಇದಾದ ಬೆನ್ನಲ್ಲೇ ರಾತ್ರೋ ರಾತ್ರಿ ಬಸ್ ಶೆಲ್ಟರ್ ಮಾದರಿ ಬದಲಾಗಿದೆ.

ಇದನ್ನೂ ಓದಿ:ಇನ್ನೂರು ಹುಡುಗಿಯರಿಗೆ ಹತ್ತು ಸಾವಿರ ಯುವಕರಿಂದ ಮದುವೆ ಅರ್ಜಿ!

ಬಸ್​ ನಿಲ್ದಾಣಗಳ ಮೇಲೆ ಗುಂಬಜ್​​ ಇರುವುದನ್ನ ಗಮನಿಸಿದ್ದೇನೆ. ಅಂತಹ ಗುಂಬಜ್ ಇರುವ ಬಸ್​ ನಿಲ್ದಾಣ ತೆರವಿಗೆ ಹೇಳಿದ್ದೇನೆ. ಮಧ್ಯೆ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್​ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದ್ರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಭಾಷಣದಲ್ಲಿ ಹೇಳಿದ್ದರು. ಈ ಹೇಳಿಕೆ ವೈರಲ್ ಆಗುತ್ತಿದ್ದಂತೆ ಬಸ್ ಶೆಲ್ಟರ್ ಬದಲಾಗಿದೆ. ಬಸ್ ಶೆಲ್ಟರ್ ಮೇಲಿರುವ ಗುಂಬಜ್ ಮೇಲೆ ಕಳಶ ಪ್ರತಿಷ್ಠಾಪನೆ ಮಾಡಲಾಗಿದೆ.

suddiyaana