31 ವರ್ಷದ ಬಳಿಕ ಜ್ಞಾನವಾಪಿ ಮಸೀದಿಯಲ್ಲಿ ವಿಗ್ರಹಗಳಿಗೆ ಪೂಜೆ

31 ವರ್ಷದ ಬಳಿಕ ಜ್ಞಾನವಾಪಿ ಮಸೀದಿಯಲ್ಲಿ ವಿಗ್ರಹಗಳಿಗೆ ಪೂಜೆ

ಪುರಾತತ್ವ ಇಲಾಖೆ ನಡೆಸಿದ ವೈಜ್ಞಾನಿಕ ಸಮೀಕ್ಷೆಯಲ್ಲಿ ಮಸೀದಿ ನಿರ್ಮಾಣ ಆಗಿರುವುದು ಮಂದಿರದ ಮೇಲೆ ಎಂಬ ಸತ್ಯ ಬಯಲಾಗಿದೆ. ಹಿಂದೂಗಳಿಗೆ ಈಗ ಪೂಜಾಧಿಕಾರ ದಕ್ಕಿದೆ. ಈ ಪ್ರಾರ್ಥನಾ ಮಂದಿರದಲ್ಲಿ ಸೀಲ್ ಮಾಡಿರುವ ಬೇಸ್‌ಮೆಂಟ್‌ನಲ್ಲಿ ಇರುವ ಹಿಂದೂ ವಿಗ್ರಹಗಳಿಗೆ ಪೂಜೆ ಮಾಡಲು ವಾರಣಾಸಿ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಗುರುವಾರ ವಿಗ್ರಹಗಳಿಗೆ ಪೂಜೆ ಆರಂಭವಾಗಿದೆ.

ಇದನ್ನೂಓದಿ : ಮನೆ ಖರೀದಿಸಿದ್ರೆ ವೈಫೈ ಫ್ರೀ ಅಲ್ಲ.. ವೈಫ್‌ ಫ್ರೀ ಕೊಡ್ತಿವಿ! – ವಿಚಿತ್ರ ಆಫರ್‌ ಘೋಷಿಸಿದ ರಿಯಲ್​ ಎಸ್ಟೇಟ್​ ಕಂಪನಿ!

ಜ್ಞಾನವಾಪಿ ಆವರಣದಲ್ಲಿ ಮಧ್ಯರಾತ್ರಿಯಲ್ಲಿ ಧಾರ್ಮಿಕ ಸಮಾರಂಭಗಳನ್ನು ನಡೆಸಲಾಯಿತು. ನೆಲಮಾಳಿಗೆಯಲ್ಲಿರುವ ವಿಗ್ರಹಕ್ಕೆ ಬುಧವಾರ ರಾತ್ರಿ 11 ಗಂಟೆಗೆ ಪೂಜೆ ನಡೆದಿದೆ. ಪೂಜೆಯ ಬಳಿಕ ಮಂಗಳಾರತಿಗೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿತ್ತು. ಈ ಮೂಲಕ ಜ್ಞಾನವಾಪಿಯಲ್ಲಿ 31 ವರ್ಷಗಳ ಬಳಿಕ ಪೂಜೆ ನಡೆಯಿತು. ಪೂಜೆ ವೇಳೆ ಮಸೀದಿಯ ಆವರಣದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು.

ವಾರಣಾಸಿಯ ಜ್ಞಾನವಾಪಿ ಮಸೀದಿಯೊಳಗೆ ಪ್ರಾರ್ಥನೆ ಸಲ್ಲಿಸಲು ಅನುಮತಿ ಪಡೆದಿರುವ ವ್ಯಾಸ್ ಕುಟುಂಬದ ಸದಸ್ಯ ಜಿತೇಂದ್ರ ನಾಥ್ ವ್ಯಾಸ್ ಪ್ರತಿಕ್ರಿಯಿಸಿ, ನಮಗೆ ಅಲ್ಲಿ ಪೂಜೆಯನ್ನು ಮತ್ತೆ ಆರಂಭಿಸಲು ಅನುಮತಿ ಸಿಕ್ಕಿರುವುದು ತುಂಬಾ ಸಂತೋಷವಾಗಿದೆ. ಬುಧವಾರ ರಾತ್ರಿ ಪೂಜೆಯ ಸಮಯದಲ್ಲಿ ದೇಗುಲದ ಟ್ರಸ್ಟ್‌ನ ಐವರು ಅರ್ಚಕರು, ವ್ಯಾಸ್ ಕುಟುಂಬದ ಸದಸ್ಯರು, ವಾರಣಾಸಿ ಡಿಎಂ ಮತ್ತು ಆಯುಕ್ತರು ಉಪಸ್ಥಿತರಿದ್ದರು.

ಈ ಸಂಬಂಧ ಭಕ್ತರೊಬ್ಬರು ಪ್ರತಿಕ್ರಿಯಿಸಿ, ನಾವೆಲ್ಲರೂ ಪ್ರತಿದಿನ ಮುಂಜಾನೆ 3:30ರ ಸುಮಾರಿಗೆ ದರ್ಶನಕ್ಕಾಗಿ ಇಲ್ಲಿಗೆ ಬರುತ್ತೇವೆ. ಇದೀಗ ನ್ಯಾಯಾಲಯದ ಆದೇಶದಿಂದ ನಾವು ಅತ್ಯಂತ ಸಂತೋಷ ಮತ್ತು ಭಾವನಾತ್ಮಕವಾಗಿದ್ದೇವೆ ಎಂದು ತಿಳಿಸಿದ್ದಾರೆ. ಇತ್ತ ವಕೀಲ ಸೋಹನ್ ಲಾಲ್ ಆರ್ಯ ಅವರು, ಇಂದು ನಾವು ತುಂಬಾ ಹೆಮ್ಮೆಪಡುತ್ತೇವೆ. ನಿನ್ನೆ ನ್ಯಾಯಾಲಯದ ತೀರ್ಪು ಅಭೂತಪೂರ್ವವಾಗಿದೆ. ವ್ಯವಸ್ಥೆಗಳನ್ನು ಮಾಡಲಾಗಿದೆ ಆದರೆ ಅದನ್ನು (ವ್ಯಾಸ್ ಕಾ ತೆಖಾನಾ) ಭಕ್ತರಿಗೆ ಇನ್ನೂ ತೆರೆಯಲಾಗಿಲ್ಲ ಎಂದು ಹೇಳಿದ್ದಾರೆ.

Shwetha M