ನಾದಬ್ರಹ್ಮ ಹಂಸಲೇಖರಿಂದ ದಸರಾ ಉದ್ಘಾಟನೆ – ಅಕ್ಟೋಬರ್ 15ರ ಬೆಳಗ್ಗೆ ನಾಡಹಬ್ಬಕ್ಕೆ ಚಾಲನೆ

ನಾದಬ್ರಹ್ಮ ಹಂಸಲೇಖರಿಂದ ದಸರಾ ಉದ್ಘಾಟನೆ – ಅಕ್ಟೋಬರ್ 15ರ ಬೆಳಗ್ಗೆ ನಾಡಹಬ್ಬಕ್ಕೆ ಚಾಲನೆ

ನಾಡಹಬ್ಬ ಮೈಸೂರು ದಸರಾಗೆ ಒಂದೂವರೆ ತಿಂಗಳಷ್ಟೇ ಬಾಕಿ ಉಳಿದಿದ್ದು ಈಗಿನಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಅಕ್ಟೋಬರ್ 15ರಂದು ಬೆಳಗ್ಗೆ 10.15 ರಿಂದ 10.30 ರೊಳಗೆ ಶುಭ ಲಗ್ನದಲ್ಲಿ ಉದ್ಘಾಟನೆಯಾಗಲಿದೆ. ಆದರೆ ಇಷ್ಟು ದಿನ ಈ ಬಾರಿ ದಸರಾವನ್ನ ಯಾರು ಉದ್ಘಾಟನೆ ಮಾಡಲಿದ್ದಾರೆ ಎನ್ನುವ ಕುತೂಹಲ ಇತ್ತು. ಇದಕ್ಕೆ ಇವತ್ತು ತೆರೆ ಬಿದ್ದಿದ್ದು ಹೆಸರನ್ನ ಬಹಿರಂಗಗೊಳಿಸಲಾಗಿದೆ.

ಇದನ್ನೂ ಓದಿ : ಚಾಲಕನಿಗೆ ತಲೆ ಸುತ್ತು ಬಂದು ಡಿವೈಡರ್‌ಗೆ ಡಿಕ್ಕಿಯಾಗಿ ಬಿಎಂಟಿಸಿ ಬಸ್‌ ಪಲ್ಟಿ

2023ರ ದಸರಾ ಉದ್ಘಾಟನೆಯ ಉದ್ಘಾಟಕರ ಆಯ್ಕೆಯನ್ನು ಸಿಎಂ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಇದೀಗ ಅಂತಿಮವಾಗಿ ಸ್ವತಃ ಮುಖ್ಯಮಂತ್ರಿಗಳೇ ಈ ಬಾರಿಯ ಮೈಸೂರು ದಸರಾ ಉದ್ಘಾಟಕರ ಹೆಸರನ್ನು ಘೋಷಣೆ ಮಾಡಿದ್ದಾರೆ. ಮೈಸೂರು ದಸರಾವನ್ನು (Mysuru Dasara) ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಅಕ್ಟೋಬರ್​ 15 ರ ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ.

ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ ಮಾಡಲಾಗುತ್ತೆ. ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ.

ಇನ್ನು ಮೈಸೂರು ದಸರಾ ಹಬ್ಬಕ್ಕೆ ಈಗಿನಿಂದಲೇ ಗಜಪಡೆಯ ತಾಲೀಮು ಆರಂಭವಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಂಪುರ ಆನೆ ಶಿಬಿರದಿಂದ ದಸರಾ ಜಂಬೂ ಸವಾರಿಗೆ ಎರಡು ಆನೆಗಳು ಆಯ್ಕೆಯಾಗಿವೆ.  ಆನೆ ಶಿಬಿರದಲ್ಲಿ ಪಾರ್ಥಸಾರಥಿ ಮತ್ತು ಕಲ್ಪನಾ ಎರಡು ಆನೆಗಳಿಗೆ ತಾಲೀಮು ನೀಡಲಾಗುತ್ತಿದೆ. ವಾಹನಗಳ ಶಬ್ದಗಳಿಗೆ ಹೆದರಬಾರದೆಂದು ಪ್ರತಿನಿತ್ಯ ಗುಂಡ್ಲುಪೇಟೆ, ಕೇರಳ ಹೆದ್ದಾರಿಯಲ್ಲಿ ಆನೆಗಳು ಪ್ರತಿದಿನ 10 ಕಿ.ಮೀ ಸಂಚಾರ ಮಾಡುತ್ತಿವೆ.  ರಾಂಪುರ ಆನೆ ಶಿಬಿರದಿಂದ ಮೂಲೆಹೊಳೆ ಚೆಕ್ ಪೋಸ್ಟ್ ವರೆಗೂ ನಿತ್ಯ ತಾಲೀಮು ನೀಡಲಾಗುತ್ತಿದೆ.

suddiyaana