ಅತ್ತೆ ಮನೆಯವರ ಕಿರುಕುಳ – ಆತ್ಮಹತ್ಯೆ ಮಾಡಿಕೊಂಡ ಅಳಿಯ!

ಅತ್ತೆ ಮನೆಯವರ ಕಿರುಕುಳ – ಆತ್ಮಹತ್ಯೆ ಮಾಡಿಕೊಂಡ ಅಳಿಯ!

ಗಂಡನ ಅಮ್ಮನನ್ನು ಮನೆಯಲ್ಲಿ ಇರಿಸಿಕೊಳ್ಳುವ ವಿಚಾರಕ್ಕೆ ಗಂಡ ಹೆಂಡತಿ ಮಧ್ಯೆ ಕಲಹ ಉಂಟಾಗಿದೆ. ಈ ವಿಚಾರಕ್ಕೆ ಪದೇ ಪದೇ ಪತ್ನಿ ಹಾಗೂ ಆಕೆಯ ಮನೆಯವರು ಕಿರುಕುಳ ನೀಡುತ್ತಾರೆ ಎಂದು ಬೇಸತ್ತ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಪೆನ್ ಡ್ರೈವ್ ಹೊರಗೆ ಬಂದರೆ ಹಾಲಿ ಸಚಿವ ರಾಜೀನಾಮೆ ನೀಡಬೇಕಾಗುತ್ತದೆ – ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ

ಮೊಲುಗು ವೆಂಕಟ್ ರೆಡ್ಡಿ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೆಂಕಟ್‌ ರೆಟ್ಟಿ  ತನ್ನ ತಾಯಿ, ಪತ್ನಿ ಕಲ್ಯಾಣಿ ಮತ್ತು ಇಬ್ಬರು ಪುತ್ರಿಯರೊಂದಿಗೆ ಹೈದರಾಬಾದ್ ನ ಕುಷಾಯಿಗೂಡ ಪೋಚಮ್ಮಗುಡಿಯಲ್ಲಿ ವಾಸಿಸುತ್ತಿದ್ದರು. ಖಾಸಗಿ ಉದ್ಯೋಗಿಯಾಗಿರುವ ವೆಂಕಟ್ ರೆಡ್ಡಿ ಜತೆ ತಾಯಿ ಇರುವುದು ಪತ್ನಿ ಹಾಗೂ ಅತ್ತೆಯವರಿಗೆ ಇಷ್ಟವಿರಲಿಲ್ಲ. ಇದರಿಂದಾಗಿ ಮತ್ತೊಂದು ಮನೆ ಮಾಡುವಂತೆ ಪೀಡಿಸುತ್ತಿದ್ದರು. ಇದರಿಂದ ದಂಪತಿ ನಡುವೆ ಕಲಹ ಉಂಟಾಗಿ ಎರಡು ತಿಂಗಳ ಹಿಂದೆ ವೆಂಕಟ್ ಪತ್ನಿ ತಮ್ಮ ಮಕ್ಕಳನ್ನು ಕರೆದುಕೊಂಡು ವರಂಗಲ್‌ನಲ್ಲಿರುವ ಹುಟ್ಟೂರಿಗೆ ಹೋಗಿದ್ದಾರೆ. ಜುಲೈ 2 ರಂದು ಪತ್ನಿ ಕಲ್ಯಾಣಿ ತನ್ನ ಪೋಷಕರೊಂದಿಗೆ ಗಂಡನ ಮನೆಗೆ ಬಂದು ನಾನಾ ರೀತಿಯ ಗಲಾಟೆ ಮಾಡಿದ್ದಾಳೆ. ಕೂಡಲೇ ಅತ್ತೆಯನ್ನು ಮನೆಯಿಂದ ಹೊರಗೆ ಕಳುಹಿಸುವಂತೆ ಒತ್ತಾಯಿಸಿದ್ದಾಳೆ.

ಪತ್ನಿ ಕಲ್ಯಾಣಿ ವೆಂಕಟ್‌ ಹೆಸರಿನಲ್ಲಿದ್ದ ಇಡೀ ಆಸ್ತಿಯನ್ನು ತನ್ನ ಮಕ್ಕಳ ಹೆಸರಿಗೆ ಬರೆಸುವಂತೆ ಒತ್ತಾಯಿಸಿದ್ದಾಳೆ. ಹೀಗೆ ಮನೆ ಮುಂದೆ ಬಂದು ಜಗಳವಾಡಿದರೆ ಮನೆ ಮಾನ ಮರ್ಯಾದೆ ಹೋಗುತ್ತದೆ ಎಂದು ಪತಿ ವೆಂಕಟ್ ಎಷ್ಟು ಹೇಳಿದರೂ ತನ್ನ ಪತ್ನಿ ಕಲ್ಯಾಣಿ ಕೇಳಲಿಲ್ಲ. ನೀವು ನಾಟಕ ಮಾಡ್ತಿದ್ದೀರಿ ಎಂದು ಗಂಡನ ಮನೆಯವರ ಬಗ್ಗೆ ಆಡಿಕೊಂಡಿದ್ದಾಳೆ. ಇದರಿಂದ ತೀವ್ರ ಮನನೊಂದ ವೆಂಕಟ್ ರೆಡ್ಡಿ ಅದೇ ದಿನ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಗಮನಿಸಿದ ತಾಯಿ ಕೂಡಲೇ ಮಗನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೆಂಕಟ್​ ಮೃತಪಟ್ಟಿದ್ದಾರೆ. ಈ ಪ್ರಕರಣ  ಕುಷಾಯಿಗೂಡ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ನಡೆದಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ಕುಷಾಯಿಗೂಡ ಎಸ್‌ಐ ಷೇಕ್​ಷಫಿ ತಿಳಿಸಿದ್ದಾರೆ.

suddiyaana