ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಕೊಲೆ ಮಾಡಿದ್ದಾರೆ – ಸಿಎಂ  ವಿರುದ್ದ ಹೊಸ ಬಾಂಬ್‌ ಸಿಡಿಸಿದ ಹರೀಶ್‌ ಪೂಂಜಾ

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಕೊಲೆ ಮಾಡಿದ್ದಾರೆ – ಸಿಎಂ  ವಿರುದ್ದ ಹೊಸ ಬಾಂಬ್‌ ಸಿಡಿಸಿದ ಹರೀಶ್‌ ಪೂಂಜಾ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್‌ ಪೂಂಜಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಡಿಕೆಶಿಗೆ ಸಿಕ್ಕೇ ಬಿಡ್ತು ಅದೃಷ್ಟದ ಮನೆ! – ಯಾರಿಗೆ ಯಾವ ಬಂಗಲೆ?

ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ವೇಳೆ ಸತ್ಯಜಿತ್ ಸುರತ್ಕಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ʼನಾನು ಹಿಂದುತ್ವಕ್ಕೆ ದ್ರೋಹ ಮಾಡಿದ್ದರೆ ನೀವು ಬಂದು ಇಲ್ಲಿ ಹರೀಶ್ ಪೂಂಜಾನನ್ನು ಸೋಲಿಸಲು ಪ್ರಯತ್ನ ಮಾಡಿದ್ದನ್ನು ನಾನು ಒಪ್ಪಿಕೊಳ್ಳುತ್ತಿದ್ದೆ. ನಾನು ಹಿಂದುತ್ವದ ಸಿದ್ಧಾಂತವನ್ನು ಬಿಟ್ಟಿದ್ದರೆ ನೀವು ಇಲ್ಲಿ ಬಂದು ಹಿಂದುತ್ವದ ವಿರುದ್ಧ ಕಾಂಗ್ರೆಸ್‌ಗೆ ಮತ ಹಾಕಿ ಎಂದಿದ್ದರೆ ನಾನು ಒಪ್ಪಿಕೊಳ್ಳುತ್ತಿದ್ದೆ. ಸತ್ಯಣ್ಣ ನಿಮ್ಮ ಹತ್ತಿರ ಒಂದು ಕೇಳುತ್ತೇನೆ. 24 ಜನ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದಂತಹ ಸಿದ್ದರಾಮಯ್ಯಗೆ ಮತ ಕೇಳಿದ್ದೀರಿ. ಬಜರಂಗದಳವನ್ನು ಬ್ಯಾನ್ ಮಾಡುತ್ತೇವೆ ಎಂದು ಹೇಳಿದ ಕಾಂಗ್ರೆಸ್‌ಗೆ ನೀವು ವೋಟು ಕೇಳಿದ್ದೀರಿ. ಇವತ್ತು ಬೆಳ್ತಂಗಡಿ ತಾಲೂಕಿನ ಜನ ಸತ್ಯಣ್ಣ ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಕೇಳುತ್ತಿದ್ದಾರೆ. ಇದಕ್ಕೆ ಸತ್ಯಣ್ಣ ಉತ್ತರ ಕೊಡಬೇಕು ಎಂದು ಸಿದ್ದರಾಮಯ್ಯ ಅವರ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ದ ನೀಡಿರುವ ವಿವಾದಾತ್ಮಕ ಹೇಳಿಕೆಯಿಂದಾಗಿ ಶಾಸಕ ಹರೀಶ್‌ ಪೂಂಜಾ  ಕಾಂಗ್ರೆಸ್‌ ಕಾರ್ಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.  ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ.

suddiyaana