ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ – ಹಾಸನ ಕ್ಷೇತ್ರದಿಂದ ಮತ್ತೆ ಲೋಕಸಭಾ ಅಖಾಡಕ್ಕೆ ಹೆಚ್.ಡಿ ದೇವೇಗೌಡ ಸ್ಪರ್ಧೆ?

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ – ಹಾಸನ ಕ್ಷೇತ್ರದಿಂದ ಮತ್ತೆ ಲೋಕಸಭಾ ಅಖಾಡಕ್ಕೆ ಹೆಚ್.ಡಿ ದೇವೇಗೌಡ ಸ್ಪರ್ಧೆ?

2024ರ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವಾಗಲೇ ಹಾಸನದಲ್ಲಿ ಜೆಡಿಎಸ್ ಸಂಸದರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಲೋಕಸಭಾ ಸದಸ್ಯತ್ವದ ಅವಧಿ ಮುಗಿಯಲು ಇನ್ನೂ 10 ತಿಂಗಳು ಬಾಕಿ ಇರುವಾಗಲೇ ಪ್ರಜ್ವಲ್ ರೇವಣ್ಣ ಅವರ ಹಾಸನ ಜೆಡಿಎಸ್​ ಎಂಪಿ ಸ್ಥಾನವನ್ನು ಕೋರ್ಟ್ ಅಸಿಂಧುಗೊಳಿಸಿದೆ. ಇದರ ಬೆನ್ನಲ್ಲೇ ಹಾಸನ ಜಿಲ್ಲಾ ಜೆಡಿಎಸ್​ನಲ್ಲಿ ರಾಜಕೀಯ ಗರಿಗೆದರಿವೆ. ಹಲವು ಬೆಳವಣಿಗೆಗಳಾಗುತ್ತಿವೆ.

ಇದನ್ನೂ ಓದಿ : ಹಾಸನಾಂಬೆ ಜಾತ್ರೆಗೆ ಮುಹೂರ್ತ ನಿಗದಿ – ನವೆಂಬರ್ 2ರಿಂದ 15ರವರೆಗೆ ದಿನದ 24 ಗಂಟೆಯೂ ದರ್ಶನ

2019ರ ಲೋಕಸಭಾ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಹಾಸನ (Hassan) ಲೋಕಸಭಾ ಕ್ಷೇತ್ರದಿಂದ ಸಂಸದರಾಗಿರುವ ಪ್ರಜ್ವಲ್ ರೇವಣ್ಣ(Prajwal Revanna) ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಅಸಿಂಧುಗೊಳಿಸಿದೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಸೇರಿದಂತೆ ಹಲವು ಕಾರಣಗಳಿಂದಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಇದರಿಂದ ಹಾಸನ ಜಿಲ್ಲಾ ಜೆಡಿಎಸ್​ನಲ್ಲಿ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೌದು ಪ್ರಜ್ವಲ್ ಅನರ್ಹ ಬೆನ್ನಲ್ಲೇ ದೇವೇಗೌಡರು ಹಾಸನದಿಂದ ಸ್ವರ್ಧೆ ವಿಚಾರ ಮುನ್ನಲೆಗೆ ಬಂದಿದೆ. 2024ರ ಲೋಕಸಭಾ ಚುನಾವಣೆಗೆ ಹಾಸನದಿಂದ ದೇವೇಗೌಡರು ಸ್ಪರ್ಧೆ ಮಾಡುವಂತೆ ಆಗ್ರಹಗಳು ಕೇಳಿ ಬರುತ್ತಿವೆ. ದೇವೇಗೌಡ ಅವರದ್ದು ಇದು ಕೊನೆ ಚುನಾವಣೆಯಾಗಿದೆ. ಆದ್ದರಿಂದ ಹಾಸನದಿಂದ ಗೆಲ್ಲಿಸಿ ದೇವೇಗೌಡರನ್ನು ಲೋಕಸಭೆಗೆ ಕಳಿಸಲು ಮುಖಂಡರು, ಕಾರ್ಯಕರ್ತರು ನಿರ್ಧರಿಸಿದ್ದಾರೆ. ಕಾರ್ಯಕರ್ತರು ಹಾಗೂ ಮುಖಂಡರು ಸೇರಿಕೊಂಡು ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ದೇವೇಗೌಡ ಅವರಿಗೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ಪ್ರಜ್ವಲ್ ರೇವಣ್ಣ ರಾಷ್ಟ್ರ ರಾಜಕಾರಣದಿಂದ ರಾಜ್ಯ ರಾಜಕೀಯಕ್ಕೆ ಬರುವ ಒಲವು ತೋರಿದ್ದಾರೆ. ಪ್ರಜ್ವಲ್ ಅನರ್ಹ ವಿಚಾರವನ್ನೇ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತವೆ. ಇದರಿಂದ ಪ್ರಜ್ವಲ್ ಸ್ಪರ್ಧೆ ಮಾಡಿದರೆ ಹಾಸನದಲ್ಲಿ ಜೆಡಿಎಸ್​​ಗೆ ಹಿನ್ನಡೆ ಆಗುವ ಸಾಧ್ಯತೆಗಳಿವೆ. ಹೀಗಾಗಿ ಗೌಡರು ಹಾಸನದಿಂದ ಸ್ಪರ್ಧೆ ಮಾಡಿದರೆ ಒಳ್ಳೆಯದು ಎನ್ನುವುದು ಜಿಲ್ಲೆಯ ಮುಖಂಡರು ಕಾರ್ಯಕರ್ತ ಅಭಿಪ್ರಾಯವಾಗಿದೆ. ಲೋಕಸಭಾ ಚುನಾವಣೆ ಸಮೀಪಿಸತ್ತಿದ್ದು, ಹಾಸನ ಟಿಕೆಟ್​ ಬಗ್ಗೆ ಈಗಿಂದಲೇ ಚರ್ಚೆ ಶುರುವಾಗಿದೆ. ಒಂದು ವೇಳೆ ಪ್ರಜ್ವಲ್​ ರೇವಣ್ಣಗೆ ಸುಪ್ರಿಂಕೋರ್ಟ್​ನಲ್ಲಿ ಹಿನ್ನಡೆಯಾದರೆ, ದೇವೇಗೌಡರೇ ಹಾಸನದಿಂದ ಸ್ಪರ್ಧೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

suddiyaana