ಮೇ ತಿಂಗಳ ನಂತರ ಸರ್ಕಾರ ಪತನ ಖಚಿತ – ಸ್ಪೋಟಕ ಭವಿಷ್ಯ ನುಡಿದ ಕುಮಾರಸ್ವಾಮಿ!

ಮೇ ತಿಂಗಳ ನಂತರ ಸರ್ಕಾರ ಪತನ ಖಚಿತ – ಸ್ಪೋಟಕ ಭವಿಷ್ಯ ನುಡಿದ ಕುಮಾರಸ್ವಾಮಿ!

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್‌ ಸರ್ಕಾರ ವಿರುದ್ಧ ಕಿಡಿಕಾರುತ್ತಲೇ ಬಂದಿದ್ದಾರೆ. ಕೆಲವು ತಿಂಗಳ ಹಿಂದೆ ರಾಜ್ಯ ಸರ್ಕಾರ ವಿರುದ್ಧ ಪೆನ್‌ಡ್ರೈವ್‌ ಬಾಂಬ್‌ ಸಿಡಿಸಿದ್ದ ಹೆಚ್‌ಡಿಕೆ. ಇದೀಗ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಹಣ ಹೊಂದಿಸಲು ಹರಸಾಹಸ ಪಡುತ್ತಿರುವ ಈ ಸರಕಾರ ಲೋಕಸಭಾ ಚುನಾವಣೆ ನಂತರ ಖಂಡಿತವಾಗಿಯೂ ಬಿದ್ದುಹೋಗಲಿದೆ. ಎಂದು ಹೆಚ್‌ಡಿಕೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಸೋಮವಾರ ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು, ಹಲವು ಕಡೆ ಬಿಗಿ ಭದ್ರತೆ

ಈ ಬಗ್ಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹೆಚ್‌ಡಿಕೆ, ನಾನು ಜನರ ಧ್ವನಿಯಾಗಿ ಇರುತ್ತೇನೆ. ಈ ಸರ್ಕಾರ ಯಾವುದೇ ಕಾರಣಕ್ಕೂ ಐದು ವರ್ಷಗಳ ಕಾಲ ಇರುವುದಿಲ್ಲ. ಮೇ ತಿಂಗಳ ಬಳಿಕ ಸರ್ಕಾರ ಪತನವಾಗಲಿದೆ. ಸ್ವಲ್ಪ ದಿನ ಕಾಯಿರಿ, ರಾಜ್ಯದ 6.5 ಕೋಟಿ ಜನರ ಕಷ್ಟ ಸುಖವನ್ನು ಅರಿತು ಕೆಲಸ ಮಾಡುವ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಕೆ.ಆರ್.ಪೇಟೆಯ ಶಾಸಕ ಗೆದ್ದಮೇಲೆ ಕೆಲಸ ಮಾಡಲಿಲ್ಲ ಎಂದುಕೊಳ್ಳಬೇಡಿ. ನೀವು ಅವರನ್ನು ಒಳ್ಳೆಯವರು ಎಂದು ಗೆಲ್ಲಿಸಿದ್ದೀರಾ. ನೀವು ಅವರ ಮೇಲೆ ಇಟ್ಟಿರುವ ಪ್ರೀತಿಯನ್ನು ಮಂಜಣ್ಣ ಕೂಡ ಇಟ್ಟುಕೊಂಡಿದ್ದಾರೆ. ನಿಮ್ಮ ಕೆಲಸಗಳನ್ನು ಶಾಸಕರ ಜೊತೆ ನಿಂತು ಮಾಡಿಸುವ ಹೊಣೆ ನನ್ನ ಮೇಲಿದೆ. ಶಾಸಕರಿಗೆ ಐದಾರು ತಿಂಗಳು ಸಮಯ ಕೊಡಿ ಎಂದು ಹೇಳಿದ್ದಾರೆ.

Shwetha M