ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಹಣ ಹಾಕುವ ಮುನ್ನ ಪ್ರತಿ ತಿಂಗಳು 2 ಸಾವಿರ ರೂ. ನಾಡ ದೇವತೆಗೆ ಅರ್ಪಣೆ!

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಹಣ ಹಾಕುವ ಮುನ್ನ ಪ್ರತಿ ತಿಂಗಳು 2 ಸಾವಿರ ರೂ. ನಾಡ ದೇವತೆಗೆ ಅರ್ಪಣೆ!

ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಈಗಾಗಲೇ ಜಾರಿಯಾಗಿದೆ. ಈ ಯೋಜನೆಗೆ ಕೆಲವು ತಿಂಗಳ ಹಿಂದೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಈ ವೇಳೆ ನಾಡದೇವತೆ ಚಾಮುಂಡೇಶ್ವರಿ ದೇವಿಗೆ 2000 ರೂ. ಅರ್ಪಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ಮಹತ್ವದ ಗೃಹಲಕ್ಷ್ಮೀ ಯೋಜನೆಯನ್ನು ಚಾಮುಂಡೇಶ್ವರಿಗೆ ಅರ್ಪಿಸಿದ್ದು, ಪ್ರತಿ ತಿಂಗಳು ದೇವಸ್ಥಾನಕ್ಕೆ 2 ಸಾವಿರ ರೂಪಾಯಿ ನೀಡಲು ನಿರ್ಧರಿಸಿದೆ.

ಇದನ್ನೂ ಓದಿ: ರಾಜ್ಯಕ್ಕೆ ಬರದ ಬರೆ – ಕಾವೇರಿ ತವರು ಕೊಡಗಿನಲ್ಲಿ ಕುಸಿಯುತ್ತಿದೆ‌ ಅಂತರ್ಜಲ ಮಟ್ಟ

ಹೌದು, ಕಾಂಗ್ರೆಸ್‌ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಈ ವೇಳೆ ನಾಡದೇವತೆ ಚಾಮುಂಡೇಶ್ವರಿಗೆ 2000 ರೂ. ಅರ್ಪಿಸಲಾಗಿತ್ತು. ಪ್ರತಿ ತಿಂಗಳು ದೇವಸ್ಥಾನಕ್ಕೆ ಯೋಜನೆಯ ಹಣ ನೀಡುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಅವರಿಗೆ ಎಂಎಲ್​ಸಿ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು. ಇದೀಗ ಎಂಎಲ್​ಸಿ ಪತ್ರಕ್ಕೆ ಕಾಂಗ್ರೆಸ್ ಸರ್ಕಾರ ಸ್ಪಂದಿಸಿದೆ. ಅವರ ಬೇಡಿಕೆಯಂತೆ ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ಅರ್ಪಿಸಲು ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆ ಜನರಿಗೆ ಅತ್ಯಂತ ಉಪಕಾರಿಯಾಗಿದೆ. ಚುನಾವಣೆಗೂ ಪೂರ್ವ ಕಾಂಗ್ರೆಸ್ ಪಕ್ಷದ ವತಿಯಿಂದ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿ ಪಕ್ಷದ ಐದು ಗ್ಯಾರಂಟಿ ಕಾರ್ಡ್​​ ಅನ್ನು ಇಟ್ಟು ದೇವಿಯ ಬಳಿ ಶಕ್ತಿ ಕೊಡು ಎಂದು ಕೋರಿಕೆಯನ್ನಿಡಲಾಗಿತ್ತು. ಆ ಸಂದರ್ಭದಲ್ಲಿ ಹರಕೆಯನ್ನು ನಾಡದೇವತೆ ಬಳಿ ಮಾಡಿಕೊಳ್ಳಲಾಗಿತ್ತು. ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಈಡೇರಿಸುವ ವಾಗ್ದಾನವನ್ನು ಮಾಡಲಾಗಿತ್ತು ಎಂದು ದಿನೇಶ್ ಗೂಳಿಗೌಡ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Shwetha M