ರೋಚಕ ಹಣಾಹಣಿಗೆ ನರೇಂದ್ರ ಮೋದಿ ಸ್ಟೇಡಿಯಂ ಸಜ್ಜು – ಭಾರತ-ಪಾಕ್ ಪಂದ್ಯಕ್ಕೆ ಪೊಲೀಸ್ ಬಿಗಿಬಂದೋಬಸ್ತ್

ರೋಚಕ ಹಣಾಹಣಿಗೆ ನರೇಂದ್ರ ಮೋದಿ ಸ್ಟೇಡಿಯಂ ಸಜ್ಜು – ಭಾರತ-ಪಾಕ್ ಪಂದ್ಯಕ್ಕೆ ಪೊಲೀಸ್ ಬಿಗಿಬಂದೋಬಸ್ತ್

ಕೆಲವೇ ಹೊತ್ತಲ್ಲಿ ಭಾರತ ಮತ್ತು ಪಾಕಿಸ್ತಾನ  ನಡುವೆ ಏಕದಿನ ವಿಶ್ವಕಪ್ ಪಂದ್ಯದ ಹಣಾಹಣಿ ಶುರುವಾಗಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಪಂದ್ಯಕ್ಕೆ ಸಜ್ಜಾಗಿದೆ. ಈ ತಂಡಗಳ ಕದನ ಕಣ್ತುಂಬಿಕೊಳ್ಳಲು ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದೆ. ಇಂದಿನ ಪಂದ್ಯಕ್ಕೆ ಇಡೀ ಕ್ರೀಡಾಂಗಣವೇ ಭರ್ತಿಯಾಗುವುದು ಖಚಿತ. ಹೀಗಾಗಿ ಪಂದ್ಯದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯವುದು ಕೂಡ ಮುಖ್ಯವಾಗಿದೆ.

ಇದನ್ನೂ ಓದಿ: ಭಾರತ – ಪಾಕ್ ರೋಚಕ ಕದನಕ್ಕೆ ಕೌಂಟ್‌ಡೌನ್ – ಅಹ್ಮದಾಬಾದ್‌ನ ಪಿಚ್ ಹೇಗಿದೆ? ಇಲ್ಲಿದೆ ಡಿಟೇಲ್ಸ್

ಭದ್ರತೆಗಾಗಿ ಸುಮಾರು 7000 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗುಜರಾತ್ ಪೊಲೀಸ್ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿ, ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಸೇರಿದಂತೆ ಸಿಬ್ಬಂದಿ ಭದ್ರತೆಯನ್ನು ನಿರ್ವಹಿಸಲಿದ್ದಾರೆ. ಆದ್ದರಿಂದ ಪೊಲೀಸ್ ಮತ್ತು ಕೇಂದ್ರೀಯ ಏಜೆನ್ಸಿಗಳಿಂದ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ. ಇದಲ್ಲದೆ ಕೇಂದ್ರೀಯ ಸಂಸ್ಥೆಗಳೂ ಪಂದ್ಯಕ್ಕೆ ಭದ್ರತಾ ವ್ಯವಸ್ಥೆ ಕಲ್ಪಿಸಿವೆ. ಭದ್ರತೆಗಾಗಿ ಸುಮಾರು 7000 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎನ್ಎಸ್ಜಿ ಗುಜರಾತ್ ಪೊಲೀಸ್ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿ, ಸಿಆರ್ಪಿಎಫ್ ಸಿಬ್ಬಂದಿ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಸೇರಿದಂತೆ ಸಿಬ್ಬಂದಿ ಭದ್ರತೆಯನ್ನು ನಿರ್ವಹಿಸಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೂ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಟ್ಟಿದ್ದಾರೆ. ಅಕ್ಟೋಬರ್ 11 ರಿಂದಲೇ ನರೇಂದ್ರ ಮೋದಿ ಸ್ಟೇಡಿಯಂ ಮತ್ತು ಸುತ್ತಮುತ್ತ ಭದ್ರತಾ ತಂಡಗಳನ್ನು ನಿಯೋಜಿಸಲಾಗಿದೆ. ಈ ಪಂದ್ಯವನ್ನು ಆನಂದಿಸಲು ಒಂದು ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಂದ್ಯದ ಎಲ್ಲಾ ಟಿಕೆಟ್ಗಳು ಈಗಾಗಲೇ ಮಾರಾಟವಾಗಿವೆ. ಅಹಮದಾಬಾದ್ ಪೊಲೀಸ್ ಆಯುಕ್ತ ಜ್ಞಾನೇಂದ್ರ ಸಿಂಗ್ ಮಲಿಕ್ ಮಾತನಾಡಿ, ‘ಪಂದ್ಯದ ವೇಳೆ 7 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಜತೆಗೆ 4,000 ಗೃಹರಕ್ಷಕ ದಳದ ಯೋಧರನ್ನು ಇರಿಸಲಾಗುವುದು. ಇವರಲ್ಲದೆ ಎನ್ಎಸ್ಜಿಯ ಮೂರು ತಂಡಗಳು ಮತ್ತು ಆ್ಯಂಟಿ ಡ್ರೋನ್‌ನ ಒಂದು ತಂಡವೂ ಇರಲಿದೆ. ಅಲ್ಲದೆ, ಬಾಂಬ್ ಡಿಸ್ಪೋಸಬಲ್ ಸ್ಕ್ವಾಡ್ ಜೊತೆಗೆ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳು ಸಹ ಇರುತ್ತವೆ ಎಂದು ಮಾಹಿತಿ ನೀಡಿದರು. ಮತ್ತೊಂದೆಡೆ, ಈ ಪಂದ್ಯದಿಂದಾಗಿ ರಾಜ್ಯದ ಪೊಲೀಸ್ ಸಿಬ್ಬಂದಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ ಎಂದು ಗುಜರಾತ್ ಪೊಲೀಸ್ ಡಿಜಿಪಿ ವಿಕಾಸ್ ಸಹಾಯ್ ಹೇಳಿದ್ದಾರೆ. ಭಾರತ-ಪಾಕ್ ಪಂದ್ಯದ ಭದ್ರತೆ ಕುರಿತು ಮಾತನಾಡಿದ ಅವರು, ಭದ್ರತೆಗೆ ಸಂಬಂಧಿಸಿದಂತೆ ಐದು ಸೂಚನೆಗಳನ್ನು ನೀಡಲಾಗಿದೆ. ಇದರಲ್ಲಿ ಕ್ರೀಡಾಂಗಣ ಮತ್ತು ಪ್ರೇಕ್ಷಕರನ್ನು ಸುರಕ್ಷೆಯ ಬಗ್ಗೆ, ನಗರದಲ್ಲಿ ಸಂಚಾರ ದಟ್ಟಣೆಯ ನಿರ್ವಹಣೆ. ಹಾಗೆಯೇ, ಉಭಯ ಕ್ರಿಕೆಟ್ ತಂಡಗಳ ಭದ್ರತೆಯನ್ನು ನೋಡಿಕೊಳ್ಳುವುದರ ಜೊತೆಗೆ ಯಾವುದೇ ರೀತಿಯ ಸಮಾಜವಿರೋಧಿ ಚಟುವಟಿಕೆಗಳು ನಡೆಯದಂತೆ ನಿಗಾ ಇಡಲಾಗಿದೆ ಎಂದಿದ್ದಾರೆ. ಹಾಗೆಯೇ ಪಂದ್ಯವನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುವವರು ತಮ್ಮ ಖಾಸಗಿ ವಾಹನಗಳ ಬದಲು ಬದಲು ಮೆಟ್ರೋ ರೈಲು ಬಳಸಬೇಕೆಂದು ಗುಜರಾತ್ ಪೊಲೀಸ್ ಡಿಜಿಪಿ ಸಲಹೆ ನೀಡಿದ್ದಾರೆ. ಹೀಗಾದರೆ ಸಂಚಾರ ಒತ್ತಡ ಸಾಕಷ್ಟು ಕಡಿಮೆಯಾಗಲಿದೆ ಎಂದಿದ್ದಾರೆ.

Sulekha