ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ – ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ!

ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಈಗಾಗಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣ ಅವಾಂತರ ಸೃಷ್ಠಿಸಿದ್ದಾನೆ. ಇದೀಗ ಮುಂದಿನ ನಾಲ್ಕು ದಿನಗಳ ಕಾಲ ಮತ್ತೆ ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: GT ಗೆಲುವಿನೊಂದಿಗೆ ಪ್ಲೇ ಆಫ್ಗೆ ಎಂಟ್ರಿ ಕೊಟ್ಟ 3 ತಂಡಗಳು – ಆರ್ಸಿಬಿ , ಪಂಜಾಬ್, ಗುಜರಾತ್ ಪ್ಲೇ ಆಫ್ ಪ್ರವೇಶ
ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾತ್ರಿ ಅಥವಾ ಸಂಜೆ ಬಳಿಕ ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.