ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ – ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ!

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ – ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ!

ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ರಾಜ್ಯದ 5 ಜಿಲ್ಲಿಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ತಿರುಪತಿ ದೇವಸ್ಥಾನಕ್ಕೆ 100 ಕೆಜಿ ತೂಕದ ಬೆಳ್ಳಿ ದೀಪಗಳ ದಾನ – ಮೈಸೂರು ರಾಜಮಾತೆಯಿಂದ ಕಾಣಿಕೆ

ಕರಾವಳಿ ಜಿಲ್ಲೆಗಳಲ್ಲಿ ಎಡೆಬಿಡದೇ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ರಾತ್ರಿಯಿಂದಶಲೇ ಮಳೆ ಸುರಿಯುತ್ತಿದ್ದು ಬೆಳಗ್ಗೆಯೂ ಮುಂದುವರಿದಿದೆ. ನಗರದ ಹಲವು ಕಡೆ ಮಳೆಯಾಗುತ್ತಿದ್ದು ಬೆಳ್ಳಂಬೆಳಗ್ಗೆ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಣೆಯಾಗಿದೆ.

ಮೇ 22 ರಂದು ಕರ್ನಾಟಕದ ಕರಾವಳಿ ಬಳಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ. ಹೀಗಾಗಿ ಮೇ 23ರವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.

ಗಾಳಿ ವೇಗ 40 ಕಿ.ಮೀ ಇರುವ ಸಾಧ್ಯತೆಯಿದ್ದು ಬೆಂಗಳೂರಿಗೆ ಇಂದು ಯಲ್ಲೋ ಅಲರ್ಟ್ ಜಾರಿಯಾಗಿದ್ದು ಗುಡುಗು ಮಿಂಚು ಸಹಿತ ಜೋರು ಮಳೆಯ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಜಾರಿಯಾಗಿದೆ.

Shwetha M

Leave a Reply

Your email address will not be published. Required fields are marked *