ತಮಿಳುನಾಡಲ್ಲಿ ಮಳೆಯ ಆರ್ಭಟಕ್ಕೆ 10 ಮಂದಿ ಸಾವು – 17 ಸಾವಿರಕ್ಕೂ ಅಧಿಕ ಮಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ತಮಿಳುನಾಡಲ್ಲಿ ಮಳೆಯ ಆರ್ಭಟಕ್ಕೆ 10 ಮಂದಿ ಸಾವು – 17 ಸಾವಿರಕ್ಕೂ ಅಧಿಕ ಮಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಭಾರಿ ಮಳೆಯಿಂದಾಗಿ ತಮಿಳುನಾಡು ರಾಜ್ಯ ತತ್ತರಿಸಿ ಹೋಗಿದೆ. ಕಳೆದ ಭಾನುವಾರದಿಂದ ನಿರಂತವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಹಾಮಳೆಗೆ ತಮಿಳುನಾಡಿನಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಕಳೆದ ಭಾನುವಾರದಿಂದ ತಮಿಳುನಾಡಿನಲ್ಲಿ ಭಾರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ದಕ್ಷಿಣ ತಮಿಳುನಾಡಿನ ಕನ್ಯಾ ಕುಮಾರಿ, ತಿರುನೆಲ್ವೇಲಿ, ತೂತ್ತುಕುಡಿ ಮತ್ತು ತೆಂಕಾಸಿಗಳಲ್ಲಿ ಪ್ರವಾಹ ಸ್ಥಿತಿ ಮುಂದುವರಿದಿದೆ. ರಾಜ್ಯದಲ್ಲಿ ಈವರೆಗೆ ಮಳೆ ಸಂಬಂಧಿಸಿದ ಘಟನೆಗಳಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡು ಮುಖ್ಯ ಕಾರ್ಯದರ್ಶಿ ಶಿವ ದಾಸ್ ಮೀನಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕೊರೊನಾ ಕಟ್ಟೆಚ್ಚರ! – ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಇನ್ನು ಭಾನುವಾರ ಮತ್ತು ಸೋಮವಾರಕ್ಕೆ ಹೋಲಿಸಿದರೆ ತಮಿಳುನಾಡಿನಲ್ಲಿ ಮಳೆಯ ಪ್ರಮಾಣವು ಕಡಿಮೆಯಾಗಿದೆ ಯಾದರೂ, ರಸ್ತೆಗಳು, ತಗ್ಗು ಪ್ರದೇಶಗಳು ಮತ್ತು ಇತರ ವಸತಿ ಸಮುಚ್ಚಯಗಳಲ್ಲಿ ಪ್ರವಾಹದ ನೀರು ಮಾತ್ರ ಕಡಿಮೆಯಾಗಿಲ್ಲ. ಇದರಿಂದ ಜನರು ತೀರಾ ಸಮಸ್ಯೆಗೆ ತುತ್ತಾಗಿದ್ದಾರೆ. ಸದ್ಯ ಹವಾಮಾನ ಇಲಾಖೆಯು ರಾಜ್ಯದಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಈಗಾಗಲೇ ಮೇಲಿನ ನಾಲ್ಕೂ ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೇ ಅತ್ಯಧಿಕ ಮಳೆಯಿಂ ದಾಗಿ ದಕ್ಷಿಣ ತಮಿಳುನಾಡಿನ ಬಹುತೇಕ ಆಣೆಕಟ್ಟುಗಳ ನೀರಿನ ಮಟ್ಟವು ಶೇ.80ರಿಂದ 100ರಷ್ಟಿದೆ ಎಂದು ಸರ್ಕಾರ ತಿಳಿಸಿದೆ.

ಇನ್ನು ರಾಜ್ಯದಲ್ಲಿ ದಾಖಲೆಯ 95. ಸೆ.ಮೀ ಮಳೆಗೆ ತುತ್ತಾ ಗಿರುವ ತೂತ್ತುಕುಡಿ ರೈಲು ನಿಲ್ದಾಣದ ಸುತ್ತ ಪ್ರವಾಹ ಸೃಷ್ಟಿಯಾಗಿದ್ದರಿಂದ ನಿಲ್ದಾಣದಲ್ಲೇ ಸಿಲುಕಿದ್ದ 800 ಜನರ ಪೈಕಿ 300 ಜನರನ್ನು ರಕ್ಷಣೆ ಮಾಡಲಾಗಿದೆ. ಜನರ ರಕ್ಷಣೆಗೆ ಹೆಲಿಕಾಪ್ಟರ್ ಬಳಕೆ ಮಾಡಲಾ ಗುತ್ತಿದ್ದು, ನಿಲ್ದಾಣದಲ್ಲಿರುವವರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸಲಾಗಿದೆ.

100 ಎನ್‌ಡಿಆರ್‌ಎಫ್‌ ಸಿಬ್ಬಂದಿ ತಂಡ ನಿಲ್ದಾಣದಲ್ಲಿ ಜನರ ರಕ್ಷಣಾ ಕಾರ್ಯಾಚರಣೆ ಯಲ್ಲಿ ತೊಡಗಿದ್ದು, ರಕ್ಷಿಸಿದರವನ್ನು ಸ್ಥಳೀಯ ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೆ ಸರಕಾರ 160 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ ಮತ್ತು ಸುಮಾರು 17,000 ಜನರನ್ನು ಈ ಪರಿಹಾರ ಶಿಬಿರಗಳಲ್ಲಿ ಇರಿಸಿದೆ. ಸುಮಾರು 34,000 ಆಹಾರ ಪ್ಯಾಕೆಟ್‌ಗಳನ್ನು ಜನರಿಗೆ ಸರಬರಾಜು ಮಾಡಲಾಗಿದೆ ಮತ್ತು ಈಗಲೂ ಸಹ, ನೀರಿನ ಮಟ್ಟ ಇನ್ನೂ ಕಡಿಮೆಯಾಗದ ಕಾರಣ  ಕೆಲವು ಗ್ರಾಮಗಳಿಗೆ ತಲುಪಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Shwetha M