ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟಕ್ಕೆ 29 ಮಂದಿ ಬಲಿ – ಶಿವನ ದೇಗುಲ ಕುಸಿತ, ಹಲವು ಮಂದಿ ನಾಪತ್ತೆ   

ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟಕ್ಕೆ 29 ಮಂದಿ ಬಲಿ – ಶಿವನ ದೇಗುಲ ಕುಸಿತ, ಹಲವು ಮಂದಿ ನಾಪತ್ತೆ   

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆಯ ರೌದ್ರಾವಾತಾರ ಮುಂದುವರೆದಿದೆ. ಮೇಘಸ್ಪೋಟದಿಂದ ಉಂಟಾಗಿರುವ ಪ್ರವಾಹ ಉಂಟಾಗಿದೆ. ಮಳೆ ಸಂಬಂಧಿತ ಪ್ರಕರಣಗಳಲ್ಲಿ ಸುಮಾರು 29 ಮಂದಿ ಸಾವನ್ನಪ್ಪಿದ್ದಾರೆ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.

ಶಿಮ್ಲಾ ಜಿಲ್ಲೆಯ ಸಮ್ಮರ್ ಹಿಲ್ ಪ್ರದೇಶದಲ್ಲಿರುವ ಶಿವ ದೇವಸ್ಥಾನದಲ್ಲಿ ಭೂಕುಸಿತ ಸಂಭವಿಸಿ ಇಡೀ ದೇಗುಲ ಕುಸಿದಿದೆ. ಈ ವೇಳೆ ಹಲವು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಕನಿಷ್ಟ 9 ಮಂದಿ ಸಾವನ್ನಪ್ಪಿದ್ದಾರೆ. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ  ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯ ಹೇಮಂತ್ ಕುಮಾರ್ ಯುಟರ್ನ್ – ಭಾವುಕ ಹೇಳಿಕೆಗೆ ಡಿಕೆಶಿ ಬಳಿ ಕ್ಷಮೆಯಾಚನೆ

ಪೊಲೀಸ್ ಮೂಲಗಳ ಪ್ರಕಾರ ಭೂ ಕುಸಿತ ಸಂಭವಿಸಿದ ಸಂದರ್ಭದಲ್ಲಿ ಶಿವನ ದೇವಸ್ಥಾನದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಇದ್ದರು. ಶ್ರಾವಣವಾದ್ದರಿಂದ ಭಕ್ತರು ವಿಶೇಷ ಪೂಜೆ ಸಲ್ಲಿಸಲು ದೇಗುಲದಲ್ಲಿ ಸೇರಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಹಿಮಾಚಲ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ರಕ್ಷಣಾ ಕಾರ್ಯಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡುವಂತೆ ಸೂಚನೆ ನೀಡಿದ್ದಾರೆ ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ಅವರು, ‘ಶಿಮ್ಲಾದಿಂದ ದುಃಖದ ಸುದ್ದಿ ಹೊರಬಿದ್ದಿದ್ದು, ಭಾರೀ ಮಳೆಯ ಪರಿಣಾಮವಾಗಿ ಸಮ್ಮರ್ ಹಿಲ್‌ನಲ್ಲಿರುವ “ಶಿವ ಮಂದಿರ” ಕುಸಿದು ಬಿದ್ದಿದ್ದು, ಹೊಮ್ಮಿದೆ. ಸದ್ಯಕ್ಕೆ ಒಂಬತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಸಿಲುಕಿರುವ ವ್ಯಕ್ತಿಗಳನ್ನು ರಕ್ಷಿಸುವ ಸಲುವಾಗಿ ಸ್ಥಳೀಯ ಆಡಳಿತವು ಅವಶೇಷಗಳನ್ನು ತೆರವುಗೊಳಿಸಲು ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತಿದೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

suddiyaana