ಕೆನಡಾದಲ್ಲಿ ಹಿಂದೂ ದೇಗುಲಗಳೇ ಟಾರ್ಗೆಟ್ – ಮೋದಿ ವಿರುದ್ಧವೂ ಆಕ್ಷೇಪಾರ್ಹ ಬರಹ..!

ಕೆನಡಾದಲ್ಲಿ ಹಿಂದೂ ದೇಗುಲಗಳೇ ಟಾರ್ಗೆಟ್ – ಮೋದಿ ವಿರುದ್ಧವೂ ಆಕ್ಷೇಪಾರ್ಹ ಬರಹ..!

ವಿದೇಶಗಳಲ್ಲಿ ಹಿಂದೂ ದೇಗುಲಗಳ ಮೇಲೆ ದಾಳಿ, ದೇಗುಲದ ಗೋಡೆ ಮೇಲೆ ಹಿಂದೂ ವಿರೋಧಿ ಬರಹ ಎಂದು ಪದೇಪದೆ ವರದಿಯಾಗುತ್ತಲೇ ಇದೆ. ಸದ್ಯ ಈಗ ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿ ಮುಂದುವರಿದಿದೆ. ರಾಮ ಮಂದಿರದ ಗೋಡೆಗಳ ಮೇಲೆ ಹಿಂದೂ ವಿರೋಧಿ ಬರಹಗಳನ್ನು ಬರೆಯಲಾಗಿದೆ. ಈ ಬಾರಿ ಮಿಸ್ಸಿಸೌಗಾದ ರಾಮ ಮಂದಿರದ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಬಿಬಿಸಿ ಸಂಸ್ಥೆಯ ದೆಹಲಿ, ಮುಂಬೈ ಕಚೇರಿಗಳಲ್ಲಿ ಐಟಿ ಪರಿಶೀಲನೆ – ರೇಡ್ ಹಿಂದಿದ್ಯಾ ಸಾಕ್ಷ್ಯಚಿತ್ರ ಸಿಟ್ಟು..!?

ಸೋಶಿಯಲ್ ಮೀಡಿಯಾದಲ್ಲಿ ಹಿಂದೂ ವಿರೋಧಿ ಬರಹದ ಚಿತ್ರಗಳು ವೈರಲ್ ಆಗುತ್ತಿವೆ. ರಾಮಮಂದಿರದ ಗೋಡೆ ಮೇಲೆ ಪ್ರಧಾನಿ ಮೋದಿ ವಿರುದ್ಧವೂ ಆಕ್ಷೇಪಾರ್ಹ ಬರಹ ಬರೆಯಲಾಗಿದೆ. ಟೊರೊಂಟೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಈ ಕೃತ್ಯವನ್ನ ಖಂಡಿಸಿದೆ. ಅಲ್ಲದೆ ಘಟನೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆನಡಾದ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಕಳೆದ ವಾರ ಬ್ರಾಂಪ್ಟನ್​ನಲ್ಲಿರುವ ಗೌರಿಶಂಕರ ದೇವಸ್ಥಾನದ ಗೋಡೆಗಳ ಮೇಲೆ ಹಿಂದೂ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು. ದೇವಾಲಯಗಳ ಮೇಲಿನ ಹಾನಿ ಕೆನಡಾದ ಭಾರತದ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ. ಇದಕ್ಕೂ ಮುನ್ನ ಕಳೆದ ವರ್ಷ ಜುಲೈನಲ್ಲಿ ಬ್ರಾಂಪ್ಟನ್​ನಲ್ಲಿ ಇಂತಹ ಮೂರು ಘಟನೆಗಳು ನಡೆದಿವೆ. ಕಳೆದ ಸೆಪ್ಟೆಂಬರ್​ನಲ್ಲಿ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಭಾರತೀಯರ ವಿರುದ್ಧ ದ್ವೇಷ ಮತ್ತು ಭಾರತ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ತೀವ್ರ ಹೆಚ್ಚಳವಾಗಿದೆ. ಕೆನಡಾ ಸರ್ಕಾರದ ಅಂಕಿ-ಅಂಶಗಳ ಪ್ರಕಾರ 2019-2021ರ ನಡುವೆ, ಕೆನಡಾದಲ್ಲಿ ಧರ್ಮ, ಲೈಂಗಿಕ ದೃಷ್ಟಿಕೋನ ಹಾಗೂ ಜನಾಂಗಕ್ಕೆ ಸಂಬಂಧಿಸಿದ ಅಪರಾಧಗಳು ಶೇ.72ರಷ್ಟು ಹೆಚ್ಚಾಗಿದೆ. ಇದು ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಅದರಲ್ಲೂ ಭಾರತೀಯ ಸಮುದಾಯಗಳಲ್ಲಿ ಭಯ ಹೆಚ್ಚಿಸಿದೆ.

suddiyaana