‘ಜಸ್ಟೀಸ್ ಫಾರ್ ನೇಹಾ’-  ಹುಬ್ಬಳ್ಳಿ ವಿದ್ಯಾರ್ಥಿನಿಯ ಕೊಲೆ ಆರೋಪಿಯನ್ನು ಗಲ್ಲಿಗೇರಿಸಲು ಬಿಗಿ ಪಟ್ಟು

‘ಜಸ್ಟೀಸ್ ಫಾರ್ ನೇಹಾ’-  ಹುಬ್ಬಳ್ಳಿ ವಿದ್ಯಾರ್ಥಿನಿಯ ಕೊಲೆ ಆರೋಪಿಯನ್ನು ಗಲ್ಲಿಗೇರಿಸಲು ಬಿಗಿ ಪಟ್ಟು

ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್​​ನಲ್ಲಿ  ಕಾರ್ಪೋರೇಟರ್‌ ನಿರಂಜನ್‌ ಹಿರೇಮಠ್‌ ಪುತ್ರಿ ನೇಹಾ ಹಿರೇಮಠಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಸೂರ್ಯ ಬಂಡಲ್ ಬ್ಯಾಂಕ್ಎ ಟಿಎಂ ಕಾರ್ಡ್‌ – ತೇಜಸ್ವಿ ಸೂರ್ಯ ಸೋಲಿಸಲು ಕೈ ಕಾರ್ಯಕರ್ತರಿಂದ ಹೊಸ ಅಸ್ತ್ರ!

ಪ್ರೀತಿ ವಿಚಾರವಾಗಿ ನೇಹಾಳನ್ನು ಆರೋಪಿ ಫಯಾಜ್ ಹತ್ಯೆಗೈದಿದ್ದಾನೆ.  ಚಾಕುವಿನಿಂದ 9 ಬಾರಿ ಇರಿದು ಕೊಂದಿದ್ದಾನೆ. ಇದೀಗ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ರಾಜ್ಯದ ಹಲವು ಕಡೆಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಎಬಿವಿಪಿ ಕಾರ್ಯಕರ್ತರು ನೇಹಾ ಹತ್ಯೆ ಮಾಡಿದ ಆರೋಪಿ ಫಯಾಜ್‌‌ನನ್ನು ಗಲ್ಲಿಗೇರಿಸುವಂತೆ ಆಗ್ರಹಿಸುತ್ತಿದ್ದಾರೆ. ಹೀಗಾಗಿ ಸರ್ಕಾರಕ್ಕೆ ತಮ್ಮ ಪ್ರತಿಭಟನೆ ಮುಟ್ಟಲೆಂದು ‘ಜಸ್ಟೀಸ್ ಫಾರ್ ನೇಹಾ’ ಎಂದು ಸಾಮಾಜಿಕ ಜಾಲತಾಣದಲ್ಲಿ ಲೈವ್​ ಬಂದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಇದಲ್ಲದೆ ವಿವಿಧ ಕಾಲೇಜು ವಿದ್ಯಾರ್ಥಿಗಳು ಎಬಿವಿಪಿ ಕಾಲೇಜು ಆವರಣದಲ್ಲಿ ಜಮಾಯಿಸಿಕೊಂಡಿದ್ದಾರೆ. ‘ಜಸ್ಟೀಸ್ ಫಾರ್ ನೇಹಾ’ ಎಂದು ಕೂಗುತ್ತ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿತ್ತ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ನೇಹಾಳನ್ನು ಹತ್ಯೆ ಮಾಡಿರುವ ಫಯಾಜ್‌‌ನನ್ನ ಗಲ್ಲಿಗೇರಿಸುವಂತೆ ಆಗ್ರಹಿಸುತ್ತಿದ್ದಾರೆ.

ಇನ್ನು ಪ್ರತಿಭಟನಾ ವಿದ್ಯಾರ್ಥಿಗಳು ಸೇರಿ ಹುಬ್ಬಳ್ಳಿ ಧಾರವಾಡ ರಸ್ತೆ ಬಂದ್ ಮಾಡಿಸುತ್ತಿದ್ದಾರೆ. ಪೊಲೀಸರು ಮನವಿ ಮಾಡಿಕೊಂಡರು ಪ್ರತಿಭಟನಾಕಾರರು ಯಾವುದಕ್ಕೆ ಸ್ಪಂದಿಸುತ್ತಿಲ್ಲ. ದಲಿತ ವಿಮೋಚನಾ ಸಮಿತಿಯಿಂದ ತಮಟೆ ಬಾರಿಸುತ್ತಾ ಮೂಲಕ ‘ಜಸ್ಟೀಸ್ ಫಾರ್ ನೇಹಾ’ ಎಂದು ಮೆರವಣಿಗೆಯೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರ ಹರಸಾಹಸಪಡುತ್ತಿದ್ದಾರೆ.

ಇನ್ನು ನೇಹಾ ಹೀರೆಮಠ್ ಕೊಲೆ ಖಂಡಿಸಿ ಆರೋಪಿಯ ಊರು ಮುನವಳ್ಳಿಯಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ಬಂದ್‌ಗೆ ಬಿಜೆಪಿ ಕರೆ ನೀಡಿದೆ. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನೇತೃತ್ವದಲ್ಲಿ ಮುನವಳ್ಳಿ ಬಂದ್ ಮಾಡಲು ನಿರ್ಧರಿಸಲಾಗಿದೆ. ಮುನವಳ್ಳಿಯ ಬಿಜೆಪಿ ಮುಖಂಡ ಮಲ್ಲೇಶ ಸುಳೇಭಾವಿಯವರು ಮುನವಳ್ಳಿ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ ಕೋರಿದ್ದಾರೆ. ಬೀದಿ ಬೀದಿಗಳಲ್ಲಿ ತಿರುಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಮನವಿ ಮಾಡಲಾಗಿದೆ. ಬಿಜೆಪಿ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡುವ ಸಾಧ್ಯತೆ ಇದೆ.

ಸದ್ಯ ಕುಟುಂಬಸ್ಥರು, ವಿದ್ಯಾರ್ಥಿಗಳು ಹಾಗೂ ಸಂಬಂಧಿಕರ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ಪದ್ಧತಿಯಂತೆ ನೇಹಾ ಹಿರೇಮಠ ಅಂತ್ಯಕ್ರಿಯೆ ನೇರವೇರಿದೆ ನೇರವೇರಿದೆ. ಇದೇ ವೇಳೆ ಮೃತ ನೇಹಾಳನ್ನು ನೆನೆದು ಸಂಬಂಧಿಕರು ಕಣ್ಣೀರಿಟ್ಟಿದ್ದಾರೆ. ಜೊತೆಗೆ ಅವರು ಕೂಡ ಆರೋಪಿಯನ್ನು ಗಲ್ಲಿಗೇರಿಸುವಂತೆ ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ.

Shwetha M