ಸಾಲು ಸಾಲು ರಜೆ – ಕೇವಲ 22 ದಿನಗಳಲ್ಲಿ ಮಂತ್ರಾಲಯದ ರಾಯರ ಮಠಕ್ಕೆ ಹರಿದುಬಂತು ಭರ್ಜರಿ ಕಾಣಿಕೆ!

ಸಾಲು ಸಾಲು ರಜೆ – ಕೇವಲ 22 ದಿನಗಳಲ್ಲಿ ಮಂತ್ರಾಲಯದ ರಾಯರ ಮಠಕ್ಕೆ ಹರಿದುಬಂತು ಭರ್ಜರಿ ಕಾಣಿಕೆ!

ಸಾಲು ಸಾಲು ರಜೆಗಳ ಹಿನ್ನಲೆ ತೀರ್ಥ ಕ್ಷೇತ್ರಗಳಿಗೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಭಕ್ತರ ಪಾಲಿನ ಕಲ್ಪವೃಕ್ಷ ಮಂತ್ರಾಲಯದ ರಾಯರ ಮಠಕ್ಕೆ ಭಕ್ತರ ದಂಡು ಹರಿದು ಬಂದಿದೆ. ಕೇವಲ 22 ದಿನಗಳಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದೆ.

ಒಂದೆಡೆ ರಾಜ್ಯದಲ್ಲಿ ಉಚಿತ ಬಸ್‌ ಪ್ರಯಾಣ, ಮತ್ತೊಂದೆಡೆ ಸಾಲು ಸಾಲು ರಜೆ. ಈ ಹಿನ್ನೆಲೆ ಮಂತ್ರಾಲಯದಲ್ಲಿ ಭಕ್ತ ಸಾಗರವೇ ಹರಿದು ಬಂದಿದೆ. ಕೇವಲ 22 ದಿನಗಳಲ್ಲಿ ಬರೋಬ್ಬರಿ ಮಠದ ಕಾಣಿಕೆ ಹುಂಡಿಯಲ್ಲಿ ಬರೋಬ್ಬರಿ 2.35 ಕೋಟಿ ಸಂಗ್ರಹವಾಗಿದೆ.

ಇದನ್ನೂ ಓದಿ: ಚಂದ್ರಯಾನ 3 ಹಿಂದಿದೆ ಹಲವು ವಿಜ್ಞಾನಿಗಳ ತಪಸ್ಸು – ಬಾಹ್ಯಾಕಾಶದಲ್ಲಿ ಚರಿತ್ರೆ ಸೃಷ್ಟಿಸಿದ ಚತುರರು ಇವರು

ಮಂಗಳವಾರ ಮಠದ ಸಿಬ್ಬಂದಿ ಹುಂಡಿಯನ್ನು ತೆರೆದು ಎಣಿಕೆ ಮಾಡಿದ್ದಾರೆ. ರಾಯರ ಹುಂಡಿಯಲ್ಲಿ 2ಕೋಟಿ 35 ಲಕ್ಷ 62 ಸಾವಿರದ 719 ರೂ. ಹಣವನ್ನು ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗಿದೆ. ಭಕ್ತರು ನೀಡಿದ ಕಾಣಿಕೆ ಶ್ರೀಮಠದ ಕಲ್ಯಾಣ ಕಾರ್ಯಕ್ಕಾಗಿ ಬಳಕೆ ಮಾಡಲು ತಿರ್ಮಾನಿಸಲಾಗಿದ್ದು, ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮೀಜಿ ಮಠದಿಂದ ಮಾಹಿತಿ ತಿಳಿಸಿದೆ.

ರಾಯರ ಆರಾಧನಾ ಮಹೋತ್ಸವಕ್ಕೆ ಕೌಂಟ್ಡೌನ್!

ಮಂತ್ರಾಲಯದಲ್ಲಿ ರಾಯರ 352ನೇ ಆರಾಧನಾ ಮಹೋತ್ಸವ ಆಗಸ್ಟ್ 29 ರಿಂದ ಸೆಪ್ಟೆಂಬರ್‌ವವರೆಗೆ ನಡೆಯಲಿದೆ. ಏಳು ದಿನಗಳ ಕಾಲ ನಡೆಯುವ ಆರಾಧನಾ ಮಹೋತ್ಸವದಲ್ಲಿ ಮಠದಲ್ಲಿ ನಿತ್ಯವೂ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಮೇಳೈಸಲಿದೆ. ಆದರೆ  ಈ ಬಾರಿ ಮಂತ್ರಾಲಯಕ್ಕೆ ಬರುವ ಭಕ್ತರಿಗೆ ಪುಣ್ಯ ಸ್ನಾನದ್ದೇ ಟೆನ್ಷನ್. ಯಾಕಂದ್ರೆ ತುಂಗಭದ್ರಾ ನದಿಯಲ್ಲಿ ನೀರಿಲ್ಲದೇ ಕಲ್ಲು ಬಂಡೆಗಳೇ ಕಾಣಿಸುತ್ತಿವೆ. ರಾಯರ ದರ್ಶನಕ್ಕೆ ಬರುವ ಭಕ್ತರು ಮೊದಲು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ನಂತ್ರ ರಾಯರ ದರ್ಶನ ಪಡೆಯೋದು ಪ್ರತೀತಿ. ಆದ್ರೆ ಮಂತ್ರಾಲಯದ ರಾಯರ ಮಠದ ಪಕ್ಕ ಹರಿಯುವ ತುಂಗಭದ್ರೆಯ ಒಡಲು ಈ ಬಾರಿ ಸಂಪೂರ್ಣ ಖಾಲಿಯಾಗಿದೆ. ಪುಣ್ಯಸ್ನಾನಕ್ಕೂ ನೀರಿನ ಸಮಸ್ಯೆ ಎದುರಾಗಿದೆ. ಇನ್ನು ಮಠದ ಆಡಳಿತ ಮಂಡಳಿ ಭಕ್ತರಿಗೆ ಸಮಸ್ಯೆ ಆಗದಂತೆ ನದಿ ದಡದಲ್ಲಿ ಸ್ನಾನಘಟ್ಟಗಳನ್ನ ನಿರ್ಮಿಸಿದೆ. ಜೊತೆಗೆ ತುಂಗಭದ್ರಾ ನದಿಗೆ ಹೆಚ್ಚುವರಿ ನೀರು ಹರಿಸುವಂತೆ ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಲಾಗುವುದು ಅಂತ ಶ್ರೀಗಳು ತಿಳಿಸಿದ್ದಾರೆ.

suddiyaana