ತಾಂತ್ರಿಕ ದೋಷದ ನಡುವೆಯೂ ಗೃಹ ಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಮೊದಲ ದಿನ 60 ಸಾವಿರ ಮಹಿಳೆಯರ ನೋಂದಣಿ

ತಾಂತ್ರಿಕ ದೋಷದ ನಡುವೆಯೂ ಗೃಹ ಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಮೊದಲ ದಿನ 60 ಸಾವಿರ ಮಹಿಳೆಯರ ನೋಂದಣಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆಗೆ ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ಗುರುವಾರ ಈ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನವೇ ಈ ಯೋಜನೆಗೆ ಬರೋಬ್ಬರಿ 60 ಸಾವಿರ ಮಹಿಳೆಯರು ಗೃಹಲಕ್ಷೀ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಮನೆಯ ಯಜಮಾನಿಗೆ 2000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೊದಲ ದಿನವೇ ತಾಂತಿಕ ದೋಷ ಕಂಡುಬಂದಿತ್ತು. ಆದರೂ ಕೂಡ ರಾಜ್ಯದಲ್ಲಿ ಬರೋಬ್ಬರಿ 60 ಸಾವಿರ ಮಹಿಳೆಯರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಮೊದಲ ದಿನವೇ ಮಹಿಳೆಯರ ನೋಂದಣಿ ಪ್ರಕ್ರಿಯೆಯಲ್ಲಿ ಭಾರಿ ಯಶಸ್ಸು ಕಂಡುಬಂದಿದೆ.

ಇದನ್ನೂ ಓದಿ: ಬಿಸಿಲ ನಾಡಿನಲ್ಲಿ ಮುಂದುವರಿದ ಮಳೆಯ ಅಬ್ಬರ – ಶಾಲೆಗಳಿಗೆ ರಜೆ ಘೋಷಣೆ

ಇನ್ನು ಗೃಹ ಲಕ್ಷ್ಮಿ ಯೋಜನೆಗೆ ಎರಡು ಮಾದರಿಯಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಅದರಲ್ಲಿ ಮೊಬೈಲ್ ಆ್ಯಪ್ ಮೂಲಕ 15,276 ಮಹಿಳೆಯರು ಹಾಗೂ ವಿವಿಧ ಸರ್ಕಾರಿ ಕೇಂದ್ರಗಳ ಮೂಲಕ ವೆಬ್ ಅಪ್ಲಿಕೇಶನ್‌ಗಳಲ್ಲಿ 44,946  ಮಹಿಳೆಯರಿಂದ ನೋಂದಣಿ ಮಾಡಲಾಗಿದೆ. ಮೊದಲ ದಿನ ಒಟ್ಟು 60,222 ಮಹಿಳೆಯರು ಸರ್ಕಾರದ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ, ನೋಂದಣಿ ಪೂರ್ಣಗೊಳಿಸಿದ್ದಾರೆ. ಇವರಿಗೆ ಆಗಸ್ಟ್ 16ರಂದು ತಲಾ 2000 ರೂ. ಹಣ ಬ್ಯಾಂಕ್‌ ಖಾತೆಗೆ ವರ್ಗಾವಣೆ ಆಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗೃಹಜ್ಯೋತಿಗೆ ಸರ್ವರ್, ಅನ್ನಭಾಗ್ಯಕ್ಕೆ ಅಕ್ಕಿ ಸಮಸ್ಯೆಗಳ ಬಳಿಕ ಪ್ರತಿ ಮನೆಯೊಡತಿಗೆ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಈಗ ತಾಂತ್ರಿಕ ಸಮಸ್ಯೆ ಕಾಡಿದೆ. ಗೃಹಲಕ್ಷ್ಮೀ ನೋಂದಣಿಗಾಗಿ ಮೊಬೈಲ್ ಗೆ ಇಲಾಖೆಯಿಂದ ಮೆಸೇಜ್ ಬರಬೇಕು. ಆದರೆ, ಮೆಸೇಜ್‌ ಮಹಿಳೆಯರಿಗೆ ಯಾವುದೇ  ಮೆಸೇಜ್‌ ಬಂದಿಲ್ಲ. ಇದರಿಂದಾಗಿ ಯಾವ ಕೆಲಸಕ್ಕೂ ಹೋಗದೇ ಬೆಂಗಳೂರು ಒನ್‌ನಲ್ಲಿಯೇ ಮಹಿಳೆಯರು ಕಾದು ಕುಳಿತಿದ್ದಾರೆ. ಮೆಸೇಜ್ ನಾವು ಸರಿಯಾಗಿ ಮಾಡಿದ್ದೀವಾ ಇಲ್ವ ಅನ್ನೋ ಗೊಂದಲಕ್ಕೆ ಮಹಿಳೆಯರು ಸಿಲುಕಿದ್ದಾರೆ. ಇನ್ನೊಂದು ಸಮಸ್ಯೆ ಏನೆಂದರೆ, ಇಲಾಖೆಯಿಂದ ಒಂದಷ್ಟು ಜನರಿಗೆ ಅವರ ಮೊಬೈಲ್ ನಂಬರ್ ಗೆ ಮೆಸೇಜ್ ಬಂದಿದೆ. ಆದರೆ, ಮೆಸೇಜ್‌ನಲ್ಲಿ  ಇರುವ ಅಡ್ರೆಸ್ ಯಾವುದು ಅಂತ ಸಾಕಷ್ಟು ಜನರಿಗೆ ಗೊತ್ತಿಲ್ಲ. ಕೆಲಸ ಬಿಟ್ಟು ಅಡ್ರೆಸ್ ಹುಡುಕಲು ಹೋಗೋಕೆ ಅಗುತ್ತಾ ಅಂತ  ಮಹಿಳೆಯರ ಪ್ರಶ್ನೆ ಮಾಡಿದ್ದಾರೆ.

ಹಣದ ವಿಚಾರದಲ್ಲಿ ಬೇರೆಲ್ಲ ಗ್ಯಾರಂಟಿ ಯೋಜನೆಗಿಂತ ಅತಿದೊಡ್ಡ ಯೋಜನೆ ಇದಾಗಿದ್ದು, ವಾರ್ಷಿಕವಾಗಿ 35 ಸಾವಿರ ಕೋಟಿ ಸರ್ಕಾರದ ಬೊಕ್ಕಸಕ್ಕೆ ಇದು ಹೊರೆಯಾಗಲಿದೆ. ಆ ನಿಟ್ಟಿನಲ್ಲಿ ಗೃಹಲಕ್ಷ್ಮೀ ನೋಂದಣಿಗಾಗಿ ಸರ್ಕಾರ ಪ್ರತ್ಯೇಕ ಅಪ್ಲಿಕೇಶನ್‌ ಅನ್ನೂ ಬಿಡುಗಡೆ ಮಾಡಿತ್ತು. ಅದೇನೇ ಆದರೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ನಿಟ್ಟಿನಲ್ಲಿ ಸರ್ಕಾರದ ಸಿದ್ದತೆ ಸೂಕ್ತವಾಗಿಲ್ಲ ಅನ್ನೋದಕ್ಕೆ ಈಗ ಎದುರಾಗಿರುವ ತಾಂತ್ರಿಕ ಸಮಸ್ಯೆಯೇ ಉದಾಹರಣೆಯಾಗಿದೆ.

suddiyaana