ದಯವಿಟ್ಟು ನನ್ನ ಕಷ್ಟವನ್ನೂ ಅರ್ಥಮಾಡಿಕೊಳ್ಳಿ.. ದೂರು ಹೇಳಲು ಬಂದ ಜನರ ಬಳಿಯೇ ತನ್ನ ಕಷ್ಟ ಹೇಳಿದ ಸಂಸದೆ ಕಂಗನಾ!

ದಯವಿಟ್ಟು ನನ್ನ ಕಷ್ಟವನ್ನೂ ಅರ್ಥಮಾಡಿಕೊಳ್ಳಿ.. ದೂರು ಹೇಳಲು ಬಂದ ಜನರ ಬಳಿಯೇ ತನ್ನ ಕಷ್ಟ ಹೇಳಿದ ಸಂಸದೆ ಕಂಗನಾ!

ಹಿಮಾಚಲ ಪ್ರದೇಶದಾದ್ಯಂತ ಭಾರೀ ಮಳೆ ಸಂಭವಿಸಿದೆ. ಮಳೆಯಿಂದಾಗಿ ಮಂಡಿಯಲ್ಲಿ ಮೇಘಸ್ಪೋಟವಾಗಿದ್ದು, ಜನರು ಪ್ರವಾಹದಿಂದ ತತ್ತರಿಸಿ ಹೋಗಿದ್ದಾರೆ. ಮನಾಲಿಯ ಪ್ರವಾಹ ಪೀಡಿತ ಪ್ರದೇಶಕ್ಕೆ ನಟಿ ಹಾಗೂ ಸಂಸದೆ ಕಂಗನಾ ರಣಾವತ್‌ ಭೇಟಿ ನೀಡಿದ್ರು. ಈ ಸಂದರ್ಭದಲ್ಲಿ ಪ್ರವಾಹ ಪೀಡಿತರು ಸಂಸದೆ ಬಳಿ ತಮ್ಮ ದೂರುಗಳನ್ನು ಹೇಳಿದ್ದಾರೆ. ಆದ್ರೆ, ಸಂಸದೆ ಜನರ ಕಷ್ಟಗಳನ್ನ ಕೇಳುವ ಬದಲು, ತಮ್ಮ ಸಮಸ್ಯೆಯನ್ನೇ ಜನರ ಬಳಿ ಹೇಳಿದ್ದಾರೆ. ಈ ವಿಪತ್ತನಿಂದಾಗಿ ನಾನೂ ಕಷ್ಟಕ್ಕೆ ಸಿಲುಕಿದೆ ಎಂದಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾಗೆ ಹಾರಿದ ಶಿಶಿರ್‌, ಐಶ್ವರ್ಯ! – BBK ಜೋಡಿ ಫುಲ್‌ ಜಾಲಿ.. ಜಾಲಿ..!

ನಟಿ ಕಂಗನಾ ಸ್ಥಳೀಯರೊಂದಿಗೆ ಮಾತನಾಡಿದ್ದಾರೆ. ನನ್ನ ಮನೆ ಮನಾಲಿಯಲ್ಲಿದೆ, ಮತ್ತು ನನ್ನ ರೆಸ್ಟೋರೆಂಟ್ ಕೂಡ ಇಲ್ಲಿಯೇ ಇದೆ. ನಿನ್ನೆ ನನ್ನ ರೆಸ್ಟೋರೆಂಟ್ ಕೇವಲ 50 ರೂ. ವ್ಯವಹಾರ ನಡೆಸಿದೆ. ಆದರೆ ನಾನು ಮಾಸಿಕ 15 ಲಕ್ಷ ರೂ. ಸಂಬಳವನ್ನು ಪಾವತಿಸಬೇಕಾಗಿದೆ. ನಾನು ಏನನ್ನು ಎದುರಿಸುತ್ತಿರಬಹುದು ಎಂದು ಊಹಿಸಿ. ನಾನು ಒಂಟಿ ಮಹಿಳೆ ಎಂದು ಕಂಗನಾ ಬೇಸರ ವ್ಯಕ್ತಪಡಿಸಿದರು.

ನಾನು ಕೂಡ ಒಂಟಿ ಮಹಿಳೆ, ಸಮಾಜದಲ್ಲಿ ಒಂಟಿ ಮಹಿಳೆಯಾಗಿ ಬದುಕುತ್ತಿದ್ದೇನೆ. ದಯವಿಟ್ಟು ನನ್ನ ಕಷ್ಟವನ್ನೂ ಅರ್ಥಮಾಡಿಕೊಳ್ಳಿ. ನನ್ನನ್ನು ಇಂಗ್ಲೆಂಡ್ ರಾಣಿ ಎಂದು ಭಾವಿಸಬೇಡಿ. ನಾನು ನನ್ನ ಸ್ವಂತ ಶ್ರಮದಿಂದ ಸಂಪಾದಿಸಿ ಬದುಕುವ ಮಹಿಳೆ ಎಂದು ಅವರು ಹೇಳಿದ್ದಾರೆ. ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರ 10,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಮತ್ತು ಸ್ಥಳೀಯ ಅಧಿಕಾರಿಗಳು ಆ ಕುರಿತು ಮಾಹಿತಿ ಹಂಚಿಕೊಳ್ಳುತ್ತಾರೆ ಎಂದು ಸಂಸದೆ ಹೇಳಿದ್ದಾರೆ. ಮನಾಲಿಯ ಪಟ್ಲಿಕುಹಾಲ್‌ಗೆ ಕಂಗನಾ ರನೌತ್ ಭೇಟಿ ನೀಡಿದಾಗ ಪ್ರತಿರೋಧ ವ್ಯಕ್ತವಾಯಿತು, ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟಗಳನ್ನು ಬೀಸುತ್ತಾ ಮತ್ತು ಕಂಗನಾ ಗೋ ಬ್ಯಾಕ್ ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು.

ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವೆ ಸ್ವಲ್ಪ ಸಮಯದವರೆಗೆ ಮಾತಿನ ಚಕಮಕಿಗೆ ಕಾರಣವಾಯಿತು. ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಜುಲೈ ತಿಂಗಳ ಭೇಟಿಯ ಸಂದರ್ಭದಲ್ಲಿ ಜನರು ಇವರ ಬಳಿ ಬಂದಾಗ, ‘ನನಗೆ ಹಣ ಬಿಡುಗಡೆ ಮಾಡಲು ಮಂತ್ರಿ ಹುದ್ದೆ ಇಲ್ಲ ಎಂದು ಹೇಳಿದ್ದರು. ಈ ಹೇಳಿಕೆ ಸ್ವಪಕ್ಷದವರಿಂದಲೇ ಟೀಕೆಗೆ ಕಾರಣವಾಗಿತ್ತು.

Shwetha M