ಬಿಎಂಟಿಸಿ ಬಸ್ ನಲ್ಲಿ ಬೆಂಕಿ – ನಿರ್ವಾಹಕ ಸಜೀವ ದಹನ

ಬಿಎಂಟಿಸಿ ಬಸ್ ನಲ್ಲಿ ಬೆಂಕಿ – ನಿರ್ವಾಹಕ ಸಜೀವ ದಹನ

ಬೆಂಗಳೂರು: ನಿಂತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನ ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ನಡೆದಿದೆ. ಮುತ್ತಯ್ಯ ಸ್ವಾಮಿ (45) ಮೃತ ದುರ್ದೈವಿ.

ಇದನ್ನೂ ಓದಿ: ಮದುವೆಯಾದ ಮಾರನೇ ದಿನವೇ ಮದುಮಗ ಮಾಯ – ಟ್ರಾಫಿಕ್ ಜಾಮ್ ನಲ್ಲೇ ಪತ್ನಿ ಬಿಟ್ಟು ಪರಾರಿ..!

ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ ಇಬ್ಬರು ಮಲಗಿದ್ದರು. ಚಾಲಕ ಬೆಳಗ್ಗೆ ಎದ್ದು ಶೌಚಾಲಯಕ್ಕೆ ಹೋಗಿದ್ದ ವೇಳೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಬಸ್​ನಲ್ಲಿ ಮಲಗಿದ್ದ ಕಂಡಕ್ಟರ್​ ಸುಟ್ಟು ಕರಕಲಾಗಿದ್ದಾರೆ. ಅದೃಷ್ಟವಶಾತ್  ಬಸ್​ ​ಚಾಲಕ ಪ್ರಕಾಶ್  ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ನಿರ್ವಾಹಕ ಮುತ್ತಯ್ಯಸ್ವಾಮಿ ಮೂಲತಃ ಗದಗ ಜಿಲ್ಲೆಯ ಹಾಲೂರಿನವರು. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ದುರಂತಕ್ಕೆ ಬಿಎಂಟಿಸಿ ಅಧಿಕಾರಿಗಳು ಸಂತಾಪ  ಸೂಚಿಸಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನಿರ್ವಾಹಕರ ಕುಟುಂಬದವರಿಗೆ ಮಾಹಿತಿ‌ ನೀಡಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ  ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

suddiyaana