ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಹುತಾತ್ಮರಲ್ಲ, ಅದೊಂದು ಅಪಾಘಾತವಷ್ಟೇ’ – ಬಿಜೆಪಿ ಸಚಿವ

ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಹುತಾತ್ಮರಲ್ಲ, ಅದೊಂದು ಅಪಾಘಾತವಷ್ಟೇ’ – ಬಿಜೆಪಿ ಸಚಿವ

ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಹುತಾತ್ಮರಾಗಿಲ್ಲ. ಅದೊಂದು ಅಪಘಾತವಷ್ಟೇ ಎಂದು ಉತ್ತರಾಖಂಡ ಸಚಿವ ಗಣೇಶ್​ ಜೋಶಿ ಹೇಳಿದ್ದಾರೆ. ‘ತ್ಯಾಗ ಕೇವಲ ಇಂದಿರಾಗಾಂಧಿ ಕುಟುಂಬಕ್ಕೆ ಸೇರಿದ್ದಲ್ಲ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಗತ್ ಸಿಂಗ್, ಸಾವರ್ಕರ್, ಚಂದ್ರಶೇಖರ್ ಆಜಾದ್ ಮುಂತಾದವರು ಬಲಿದಾನ ಮಾಡಿದ್ದಾರೆ. ಹತ್ಯೆಯಾಗಿರುವುದು ತ್ಯಾಗವಲ್ಲ, ಅಪಘಾತ ಮತ್ತು ತ್ಯಾಗಕ್ಕೂ ವ್ಯತ್ಯಾಸವಿದೆ’ ಎಂದು ಉತ್ತರಾಖಂಡ ಸಚಿವ ಗಣೇಶ್​ ಜೋಶಿ ಹೇಳಿದ್ದಾರೆ.

ಇದನ್ನೂ ಓದಿ:  ಅದಾನಿ ಸಮೂಹದ ತೆಕ್ಕೆಗೆ ಹೈಫಾ ಪೋರ್ಟ್- ಮೈಲಿಗಲ್ಲು ಎಂದ ಇಸ್ರೇಲ್ ಪ್ರಧಾನಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಯನ್ನು ರಾಹುಲ್ ಗಾಂಧಿಗೆ ಸುಗಮವಾಗಿ ಮುಗಿಸಲು ಸಹಾಯವಾಗಿದ್ದು ಪ್ರಧಾನಿ ನರೇಂದ್ರ ಮೋದಿಯವರ ಕಾರಣದಿಂದ. ಈ ಕೀರ್ತಿ ನರೇಂದ್ರ ಮೋದಿಯವರಿಗೆ ಸಲ್ಲಬೇಕು. ಕಾಶ್ಮೀರಕ್ಕೆ ಸಂಬಂಧಿಸಿದ 370 ನೇ ವಿಧಿಯನ್ನು ರದ್ದುಗೊಳಿಸದಿದ್ದರೆ, ಅಲ್ಲಿ ಸಹಜ ಸ್ಥಿತಿ ಮರಳುತ್ತಿರಲಿಲ್ಲ. ರಾಹುಲ್ ಗಾಂಧಿಯವರು ಲಾಲ್ ಚೌಕ್‌ನಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಉತ್ತರಾಖಂಡ ಸಚಿವ ಗಣೇಶ್​ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ತಮ್ಮ ಅಜ್ಜಿ ಇಂದಿರಾ ಗಾಂಧಿ ಮತ್ತು ತಂದೆ ರಾಜೀವ್ ಗಾಂಧಿಯವರ ಹತ್ಯೆಯ ಸುದ್ದಿ ಕೇಳಿದಾಗ ನಾನು ತುಂಬಾ ದುಃಖಿತನಾಗಿದ್ದೆ. ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಮೋದಿ, ಅಮಿತ್ ಶಾ, ಬಿಜೆಪಿ, ಆರ್‌ಎಸ್‌ಎಸ್‌ಗೆ ಆ ನೋವು ಗೊತ್ತಿಲ್ಲ. ಆ ನೋವು ಸೇನೆ ಮತ್ತು ಕಾಶ್ಮೀರಿಗಳಿಗೆ ಮಾತ್ರ ಗೊತ್ತು’ ಎಂದು ಹೇಳಿದ್ದರು. ರಾಹುಲ್ ಗಾಂಧಿ ಈ ಹೇಳಿಕೆಗೆ ಉತ್ತರಾಖಂಡ ಸಚಿವ ಗಣೇಶ್​ ಜೋಶಿ ಈ ರೀತಿಯಾಗಿ ಕೌಂಟರ್ ನೀಡಿದ್ದಾರೆ.

suddiyaana