‘ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು’ –ಟ್ವಿಟ್ಟರ್ ಖಾತೆಯಲ್ಲಿ ಕಾಂಗ್ರೆಸ್ ಟೀಕೆ
ಸಂಸದ ಪ್ರತಾಪ್ ಸಿಂಹ ವಿರುದ್ಧ ವಿಪಕ್ಷಗಳ ವಾಗ್ದಾಳಿ

‘ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು’ –ಟ್ವಿಟ್ಟರ್ ಖಾತೆಯಲ್ಲಿ ಕಾಂಗ್ರೆಸ್ ಟೀಕೆಸಂಸದ ಪ್ರತಾಪ್ ಸಿಂಹ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಬಸ್ ಶೆಲ್ಟರ್ ಮೇಲಿರುವ ಗುಂಬಜ್ ಒಡೆದು ಹಾಕ್ತೀನಿ ಎಂದು ಗುಡುಗಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸುತ್ತಿದೆ. ನಿನ್ನೆಯಷ್ಟೇ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಪ್ರತಾಪ್ ಸಿಂಹ ಅವ್ರಿಗೆ ಕಾಮನ್‌ಸೆನ್ಸ್ ಇಲ್ವಾ ಅಂತಾ ಕೇಳಿದ್ದರು. ಇವತ್ತು ಕಾಂಗ್ರೆಸ್ ತಮ್ಮ ಟ್ವಿಟ್ಟರ್ ಖಾತೆ ಮೂಲಕ  ಬಸ್ ನಿಲ್ದಾಣ ಒಡೆಯುತ್ತೇನೆ ಅನ್ನೋ ಸಂಸದರ ಹೇಳಿಕೆಯನ್ನು ಟೀಕಿಸಿದೆ.

ಇದನ್ನೂ ಓದಿ: ಒಡೆಯುತ್ತೇನೆ ಎನ್ನಲು ಪ್ರತಾಪ ಸಿಂಹ ಯಾರು?- ಸಿದ್ದು ವಾಗ್ದಾಳಿ

ಮೈಸೂರು ನಗರದ ಊಟಿ ರಸ್ತೆಯ ಜೆಎಸ್‌ಎಸ್‌ ಕಾಲೇಜು ಬಳಿ ನಿರ್ಮಿಸಿರುವ ಬಸ್ ಶೆಲ್ಟರ್ ಮೇಲೆ ಗುಂಬಜ್ ಇರುವುದನ್ನ ನೋಡಿ ಸಂಸದ ಪ್ರತಾಪ್ ಸಿಂಹ ಅದನ್ನ ಒಡೆಯುತ್ತೇನೆ. ಜಿಲ್ಲಾಡಳಿತದ ಅನುಮತಿಗೂ ಕಾಯುವುದಿಲ್ಲ ಅಂತಾ ಆಕ್ರೋಶ ಹೊರಹಾಕಿದ್ದರು. ಈ ಮಾತನ್ನೇ ಇಟ್ಟುಕೊಂಡು ಕಾಂಗ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ , ಹಿಂದೆ ಬ್ಯಾರಿಕೆಡ್ ಮುರಿದಿದ್ದ ಸಂಸದ @mepratap ಈಗ ಮೈಸೂರಿನ ಬಸ್ ನಿಲ್ದಾಣ ಒಡೆಯುತ್ತೇನೆ ಎನ್ನುತ್ತಿದ್ದಾರೆ. ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು, ಏಕೆಂದರೆ, ಸಾರ್ವಜನಿಕ ಆಸ್ತಿ ಹಾನಿಪಡಿಸುವವರ ಆಸ್ತಿ ಮುಟ್ಟುಗೋಲು ಹಾಗೂ ಜೆಸಿಬಿ ನುಗ್ಗಿಸುವುದು ಇವರದ್ದೇ ಪಕ್ಷದ ಆಗ್ರಹಗಳಲ್ಲವೇ? ಎಂದು ಬರೆದು ಪೋಸ್ಟ್ ಮಾಡಿದೆ.

suddiyaana