ಆಸ್ಕರ್‌ ವೇದಿಕೆಗೆ ಬೆತ್ತಲಾಗಿ ಬಂದ ಖ್ಯಾತ ನಟ! – ಆಮೇಲೆ ಏನಾಯ್ತು?

ಆಸ್ಕರ್‌ ವೇದಿಕೆಗೆ ಬೆತ್ತಲಾಗಿ ಬಂದ ಖ್ಯಾತ ನಟ! – ಆಮೇಲೆ ಏನಾಯ್ತು?

ಪ್ರತಿಷ್ಠಿತ 96ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಅಮೆರಿಕಾದ ಲಾಸ್ ಏಂಜಲೀಸ್ ನ ಡಾಲ್ಬಿ ಚಿತ್ರಮಂದಿರದಲ್ಲಿ ನಡೆಯಿತು. ಸಮಾರಂಭ ಅಂದ ಮೇಲೆ ಸಣ್ಣ ಪುಟ್ಟ ಎಡವಟ್ಟುಗಳು ಆಗೋದು ಸಹಜನೇ.. ಕೆಲವನ್ನು ಆಸ್ಕರ್ ಸಮಿತಿಯೇ ಡಿಸೈನ್ ಮಾಡಿದರೆ, ಇನ್ನೂ ಕೆಲವು ತಾನಾಗಿಯೇ ಅಲ್ಲಿ ನಡೆದು ಬಿಡುತ್ತವೆ. ಕೆಲ ವರ್ಷದ ಹಿಂದೆ ನಿರೂಪಕನ ಮೇಲೆ ನಟರೊಬ್ಬರು ಕಪಾಳ ಮೋಕ್ಷ ಮಾಡಿದ್ದರು. ಇದು ಭಾರಿ ಸುದ್ದಿಯಾಗಿತ್ತು. ಈ ಬಾರಿಯೂ ಒಂದು ಎಡವಟ್ಟು ನಡೆದು ಹೋಗಿದೆ.. ಪ್ರಶಸ್ತಿ ಘೋಷಣೆಗಾಗಿ ಖ್ಯಾತ ನಟರೊಬ್ಬರು ಬೆತ್ತಲೆಯಾಗಿ ಸ್ಟೇಜ್‌ ಗೆ ಬಂದಿದ್ದಾರೆ.. ಇದೀಗ ಇದರ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಕಾಟನ್ ಕ್ಯಾಂಡಿ, ಕೃತಕ ಬಣ್ಣ ಬಳಿಸಿದ ಗೋಬಿ ಮಂಚೂರಿ ನಿಷೇಧ

ಅಷ್ಟಕ್ಕೂ ಆಗಿದ್ದೇನು?

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತ್ಯುತ್ತಮ ಕಾಸ್ಟ್ಯೂಮ್ ಡಿಸೈನರ್ ಪ್ರಶಸ್ತಿಯನ್ನು ಘೋಷಣೆ ಮಾಡಲೆಂದು ಖ್ಯಾತ ಹಾಲಿವುಡ್ ನಟ, ಡಬ್ಲುಡಬ್ಲುಇ ಸ್ಟಾರ್ ಜಾನ್ ಸೇನಾ  ವೇದಿಕೆಗೆ ಕರೆಯಲಾಗಿತ್ತು. ಈ ವೇಳೆ  ಜಾನ್‌ ಸೇನಾ ವೇದಿಕೆಗೆ ಬೆತ್ತಲೆಯಾಗಿ ವೇದಿಕೆಗೆ ಬಂದಿದ್ದಾರೆ. ಸ್ಟೋರಿ ಬೋರ್ಡ್ ನಿಂದ ಖಾಸಗಿ ಅಂಗಾಂಗ ಮುಚ್ಚಿಕೊಂಡು ಮೈಕ್ ಮುಂದೆ ನಿಂತಿದ್ದಾರೆ. ನಂತರ ವೇದಿಕೆಯ ಮೇಲೆಯೇ ಅವರಿಗೆ ಡಿಸೈನರ್ ಬಟ್ಟೆ ತೊಡಿಸಿದ್ದಾರೆ. ಜಾನ್‌ ಸೇನಾ ಈ ರೀತಿ ಬೆತ್ತಲೆಯಾಗಿ ಬರುವುದು ಕಾರ್ಯಕ್ರಮದ ಭಾಗವಾಗಿತ್ತು. ಇದೀಗ ಈ ನಡೆ ಸಾಕಷ್ಟು ವಿರೋಧಕ್ಕೂ ಕಾರಣವಾಗಿದೆ.

ಈ ಬಾರಿ ಹಾಲಿವುಡ್‌ನಲ್ಲಿ ಸದ್ದು ಮಾಡಿದ ಸಿನಿಮಾಗಳು ಆಸ್ಕರ್‌ ಪ್ರಶಸ್ತಿವನ್ನು ಬಾಚಿಕೊಂಡಿವೆ. ಈ ಬಾರಿ ಅತ್ಯುತ್ತಮ ಚಿತ್ರ ಪ್ರಶಸ್ತಿಯು ಓಪನ್ ಹೈಮರ್ ಚಿತ್ರ ಪಡೆದುಕೊಂಡಿದೆ. ಅತ್ಯುತ್ತಮ ನಟ ಪ್ರಶಸ್ತಿಯು ಓಪನ್ ಹೈಮರ್ ಸಿನಿಮಾಗಾಗಿ ಸಿಲಿಯನ್ ಮರ್ಫಿ ಪಡೆದುಕೊಂಡರೆ, ಅತ್ಯುತ್ತಮ ನಟಿ ಪ್ರಶಸ್ತಿಯು ಪೂರ್ ಥಿಂಗ್ಸ್ ಸಿನಿಮಾಗಾಗಿ ಎಮ್ಮಾ ಸ್ಟೋನ್ ಪಡೆದುಕೊಂಡಿದ್ದಾರೆ. ಅತ್ಯುತ್ತಮ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಓಪನ್ ಹೈಮರ್ ಚಿತ್ರಕ್ಕಾಗಿ ಪಡೆದುಕೊಂಡಿದ್ದಾರೆ. ಓಪನ್ ಹೈಮರ್ ಚಿತ್ರದ ನಟನೆಗಾಗಿ ರಾಬರ್ಟ್ ಡೌನಿ ಜ್ಯೂ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಂದಿದ್ದರೆ, ದಿ ಹೋಲ್ಡೋವರ್ಸ್ ಸಿನಿಮಾದಲ್ಲಿನ ಅಭಿನಯಕ್ಕಾಗಿ ಡೇವಿನ್ ಜಾಯ್ ರಾಂಡೋಲ್ಫ್‍ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಭಾರತಕ್ಕೆ ಈ ಬಾರಿ ಯಾವುದೇ ಪ್ರಶಸ್ತಿ ಇಲ್ಲ!

ಕಳೆದ ಬಾರಿ ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿ ಬಂದಿದ್ದವು. ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಬಂದಿದ್ದರೆ, ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರವೂ ಆಸ್ಕರ್ ಪ್ರಶಸ್ತಿ ಪಡೆದಿತ್ತು. ಈ ಬಾರಿ ಭಾರತದ ಯಾವುದೇ ಚಿತ್ರಕ್ಕೆ ಅಥವಾ ಡಾಕ್ಯುಮೆಂಟರಿಗೆ ಪ್ರಶಸ್ತಿ ಬಾರದೇ ನಿರಾಸೆ ಮೂಡಿಸಿದೆ. ಸಾಕ್ಷ್ಯಚಿತ್ರ ವಿಭಾಗದಲ್ಲಿ ಟು ಕಿಲ್ ಎ ಟೈಗರ್ ಸಾಕ್ಷ್ಯ ಚಿತ್ರವಿತ್ತು. ಆದರೆ, ಅದಕ್ಕೆ ಈ ಬಾರಿ ಪ್ರಶಸ್ತಿ ಬಂದಿಲ್ಲ. ಆದರೆ ಈ ಬಾರಿ ವೇದಿಕೆ ಮೇಲೆ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ ಸಲ್ಲಿಕೆ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಇದು ಭಾರತಕ್ಕೆ ಹೆಮ್ಮೆಯ ಕ್ಷಣ’ ಎಂದು ಫ್ಯಾನ್ಸ್ ಕರೆದಿದ್ದಾರೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಎಸ್​ಎಸ್​ ರಾಜಮೌಳಿ ತಂಡಕ್ಕೆ ಶುಭಕೋರುತ್ತಿದ್ದಾರೆ.

Shwetha M