ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ – ಕೆಎಸ್‌ಆರ್‌ಟಿಸಿ 2,000 ವಿಶೇಷ ಬಸ್‌!

ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ – ಕೆಎಸ್‌ಆರ್‌ಟಿಸಿ 2,000 ವಿಶೇಷ ಬಸ್‌!

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹಬ್ಬದ ಹಿನ್ನೆಲೆ ಸಾಲು ಸಾಲು ರಜೆ ಇರುವ ಕಾರಣ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವವರು ಊರಿಗೆ ತೆರಳಲು ಸಿದ್ದವಾಗಿದ್ದಾನೆ. ಹೀಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದೀಪಾವಳಿ ಹಬ್ಬಕ್ಕೆ ವಿಶೇಷ ಬಸ್‌ಗ ವ್ಯವಸ್ಥೆ ಮಾಡಿದೆ. ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಭಾಗಗಳಿಗೆ 2000 ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ ಎಂದು ಮಾಹಿತಿ ನೀಡಿದೆ.

ನವೆಂಬರ್‌ 12ರಿಂದ ದೀಪಾವಳಿ ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಪ್ರಯಾಣಿಕರು ಮುಂಗಡ ಬುಕ್ಕಿಂಗ್‌ ಮಾಡಿಕೊಂಡು ಅಥವಾ ನಿಲ್ದಾಣಗಳಲ್ಲಿ ಬಂದು ಟಿಕೆಟ್‌ ಪಡೆದು ಸಂಚಾರ ನಡೆಸಬಹುದು ಎಂದು ಕೆಎಸ್‌ಆರ್‌ಟಿಸಿ ಮಾಹಿತಿ ನೀಡಿದೆ.

ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ʼಮೋದಿ ಕಿ ಗ್ಯಾರಂಟಿʼ – ಭೂರಹಿತ ಕೃಷಿಕರಿಗೆ ₹10,000, ಮಹಿಳೆಯರಿಗೆ ₹12,000 ಘೋಷಣೆ!

ವಿಶೇಷ ಬಸ್ಯಾವಾಗಿನಿಂದ ಆರಂಭ?

ಬೆಂಗಳೂರಿನಿಂದ ವಿವಿಧ ಕಡೆ ಸಂಚರಿಸುವ ಪ್ರಯಾಣಿಕರಿಗೆ ನವೆಂಬರ್‌ 10, 11 ಹಾಗೂ 12 ರಂದು ಮೂರು ದಿನ (ಶುಕ್ರವಾರ, ಶನಿವಾರ ಹಾಗೂ ಭಾನುವಾರ) ವಿಶೇಷ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ವಿವಿಧ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳಿಂದ ವಿಶೇಷ ಬಸ್‌ ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ಹೇಳಿದೆ.

ಹಬ್ಬದ ಬಳಿಕ ಹಿಂದಿರುಗುವುದಕ್ಕೂ ವಿಶೇಷ ಬಸ್ಲಭ್ಯ!

ಇನ್ನು ಹಬ್ಬ ಮುಗಿದ ಬಳಿಕ ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗಾಗಿ ಜಿಲ್ಲಾ ಕೇಂದ್ರ, ಪ್ರಮುಖ ನಗರ, ಪಟ್ಟಣಗಳಿಂದ ನವೆಂಬರ್‌ 14 ಮತ್ತು 15 ರಂದು ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮಾಹಿತಿ ನೀಡಿದೆ.

ಯಾವ ನಿಲ್ದಾಣದಿಂದ ಯಾವ ಊರಿಗೆ ಬಸ್‌?

ಕೆಂಪೇಗೌಡ ಬಸ್ ನಿಲ್ದಾಣ – ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸಂಚರಿಸಲಿವೆ. ಮೈಸೂರು ರಸ್ತೆ ಸ್ಯಾಟ್‌ಲೈಟ್ ಬಸ್ ನಿಲ್ದಾಣ – ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ. ಶಾಂತಿನಗರ ಬಸ್ ನಿಲ್ದಾಣ – ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ.

ಟಿಕೆಟ್ನಲ್ಲಿಯೂ ರಿಯಾಯಿತಿ

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು. ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

Shwetha M