ಕಾಂತಾರ-2 ಗಾಗಿ 11 ಕೆಜಿ ತೂಕ ಇಳಿಸಿಕೊಂಡ ರಿಷಬ್ ಶೆಟ್ಟಿ – ₹150 ಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ

ಕಾಂತಾರ-2 ಗಾಗಿ 11 ಕೆಜಿ ತೂಕ ಇಳಿಸಿಕೊಂಡ ರಿಷಬ್ ಶೆಟ್ಟಿ – ₹150 ಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ

ಕನ್ನಡದ ಕಾಂತಾರ ಸಿನಿಮಾ ವಿಭಿನ್ನ ಕಥೆ ಮೂಲಕವೇ ಜಗತ್ತಿನಾದ್ಯಂತ ಭರ್ಜರಿ ಸಕ್ಸಸ್ ಕಂಡಿದೆ. ಬಾಕ್ಸಾಫೀಸಿನಲ್ಲಿ ಬರೋಬ್ಬರಿ 398 ಕೋಟಿ ರೂಪಾಯಿ ಗಳಿಸಿದೆ. ಹೀಗಾಗಿಯೇ ಸಹಜವಾಗಿಯೇ ಕಾಂತಾರ 2 ಬಗ್ಗೆ ಸಿನಿಪ್ರಿಯರು ಭಾರೀ ಕುತೂಹಲ ಇಟ್ಟುಕೊಂಡಿದ್ದಾರೆ. ಸಿನಿಮಾ ತಂಡ ಕೂಡ ಮೊದಲ ಪಾರ್ಟ್‌ಗಿಂತ ಅದ್ಧೂರಿಯಾಗಿ ನಿರ್ಮಾಣ ಮಾಡಲು ಮುಂದಾಗಿದೆ.

ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ ಕಾಂತಾರ 2 ಮೇಕಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಕಾಂತಾರ ಮೊದಲನೇ ಭಾಗದ ಗ್ರ್ಯಾಂಡ್‌ ಸಕ್ಸಸ್‌ ನಂತರ, ನಟ-ನಿರ್ದೇಶಕ ರಿಷಬ್ ಶೆಟ್ಟಿ ವೀಕ್ಷಕರ ನಿರೀಕ್ಷೆಗಳಿಗೆ ತಕ್ಕಂತೆ ಸಿನಿಮಾವನ್ನು ತರಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ. ಇದೀಗ ಚಿತ್ರ ತಂಡ ಕಾಂತಾರ-2 ವಿಚಾರವಾಗಿ ಮತ್ತೊಂದು ಇಂಟ್ರೆಸ್ಟಿಂಗ್ ಸುದ್ದಿಯನ್ನು ಬಹಿರಂಗಪಡಿಸಿದೆ.. ಬಿಗ್ ಬಜೆಟ್ ನಲ್ಲಿ ಕಾಂತಾರ 2 ಚಿತ್ರತಂಡ ನಿರ್ಮಾಣಕ್ಕೆ ರೆಡಿಯಾಗಿದೆ ಎಂದು ತಿಳಿದುಂದಿದೆ.

ಇದನ್ನೂ ಓದಿ : ಬಾಲಿವುಡ್‌ನಲ್ಲಿ ಸೌತ್ ಲೇಡಿ ಸೂಪರ್‌ಸ್ಟಾರ್ ಖದರ್ – ಅತಿ ಹೆಚ್ಚು ಸಂಭಾವನೆ ಪಡೆದು ಸುದ್ದಿಯಾದ ನಯನತಾರಾ

ದಾಖಲೆಯ ಮೇಲೆ ದಾಖಲೆ ಬರೆದ ಕಾಂತಾರ  ಭಾರತದಲ್ಲಿ 362 ಕೋಟಿ ಕಲೆ ಹಾಕಿದರೆ, ವಿಶ್ವಾದ್ಯಂತ 398 ಕೋಟಿ ಕ್ಲಬ್​ಗೆ ಸೇರಿಸಿತು.  ಕನ್ನಡದಲ್ಲಿ ನಿರ್ಮಿಸಿದ್ದ ‘ಕಾಂತಾರ’ ನಂತರ  ತೆಲುಗು, ಹಿಂದಿ, ತಮಿಳು ವರ್ಷನ್‌ಗಳಲ್ಲಿಯೂ ಡಬ್​ ಆಗಿ ಅಲ್ಲಿಯೂ ಜನ ಮೆಚ್ಚುಗೆ ಗಳಿಸಿತು. ಕಾಂತಾರ ಇನ್ನೂ ಹೆಚ್ಚು ಹೆಸರು ಮಾಡಲು ಕಾರಣವೆಂದರೆ ಅತ್ಯಂತ ಕಡಿಮೆ ಬಜೆಟ್​ನಲ್ಲಿ ಇದನ್ನು ನಿರ್ಮಿಸಲಾಗಿತ್ತು. ಇದಕ್ಕೆ ಖರ್ಚು ಮಾಡಿದ್ದು ಕೇವಲ 16 ಕೋಟಿ ರೂ. ಮಾತ್ರ. ಆದರೆ, ಕಾಂತಾರ-2 ಹಾಗಲ್ಲ. ಕಾಂತಾರ ಮೊದಲಿನ ಭಾಗದ ಸಕ್ಸಸ್‌ನಿಂದ ವೀಕ್ಷಕರಿಗೆ ಚಿತ್ರದ ಬಗ್ಗೆ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ. ಹೀಗಾಗಿ ಚಿತ್ರತಂಡ ಹೆಚ್ಚು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮಾತ್ರವಲ್ಲ, ಕಾಂತಾರ-2 ಬರೋಬ್ಬರಿ 150 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾಗುತ್ತಿದೆ ಎಂದು ವರದಿಯಾಗಿದೆ. ಕಾಂತಾರ 2 ಮೇಲೆ ಭಾರಿ ನಿರೀಕ್ಷೆಗಳಿರುವ ಕಾರಣಕ್ಕಾಗಿಯೇ ದೊಡ್ಡಮಟ್ಟದಲ್ಲಿ ಸಿನಿಮಾ ಮಾಡಲು ನಿರ್ಮಾಪಕರು ಪ್ಲ್ಯಾನ್ ಮಾಡಿಕೊಂಡಿದ್ದಾರಂತೆ.

ಕಾಂತಾರ 2ನಲ್ಲಿನ ತನ್ನ ಪಾತ್ರಕ್ಕಾಗಿ ರಿಷಬ್ ಶೆಟ್ಟಿ ಕೂಡಾ ತೀವ್ರ ರೂಪಾಂತರಕ್ಕೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ತೆಳ್ಳಗೆ ಕಾಣಿಸಿಕೊಳ್ಳಲು ಸುಮಾರು 11 ಕೆಜಿ ತೂಕವನ್ನ ಇಳಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಕಾಂತಾರ 2 ಚಿತ್ರದಲ್ಲಿ ರಿಷಬ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ 11 ಕೆಜಿ ದೇಹ ತೂಕವನ್ನು ಕಮ್ಮಿ ಮಾಡಿಕೊಳ್ಳಲಿದ್ದಾರೆ. ಕಾಂತಾರ ಕಥೆಯು ಕರಾವಳಿ ಹಿನ್ನೆಲೆಯಲ್ಲಿ ಸಾಗುವುದರಿಂದ, ಅಲ್ಲಿಯೇ ಶೂಟಿಂಗ್ ನಡೆಯಲಿದೆ. ಕಥೆ ಮತ್ತು ಚಿತ್ರಕಥೆ ಬರೆಯುವ ಸಲುವಾಗಿ ರಿಷಬ್ ಶೆಟ್ಟಿ ಮತ್ತು ಚಿತ್ರದ ಬರಹಗಾರರಾದ ಅನಿರುದ್ಧ್ ಮಹೇಶ್, ಶನೀಲ್‌ ಗುರು & ಟೀಮ್ ಈಗಾಗಲೇ ಮಂಗಳೂರಿಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

 

Shantha Kumari