ಆಸ್ಕರ್ ಅಂಗಳದಲ್ಲಿ ಕಾಂತಾರ, ವಿಕ್ರಾಂತ್ ರೋಣ – ಅರ್ಹತೆ ಸುತ್ತು ಪಾಸ್ ಮಾಡಿದ ಕನ್ನಡ ಚಿತ್ರಗಳು

ಆಸ್ಕರ್ ಅಂಗಳದಲ್ಲಿ ಕಾಂತಾರ, ವಿಕ್ರಾಂತ್ ರೋಣ – ಅರ್ಹತೆ ಸುತ್ತು ಪಾಸ್ ಮಾಡಿದ ಕನ್ನಡ ಚಿತ್ರಗಳು

ರಿಷಬ್ ಶೆಟ್ಟಿ ನಟನೆಯ ಸೂಪರ್ ಹಿಟ್ ಚಿತ್ರ ‘ಕಾಂತಾರ’ ಸಿನಿಮಾ ಈಗ ಮತ್ತೊಂದು ದಾಖಲೆ ಸೃಷ್ಟಿಸಲು ಸಜ್ಜಾಗುತ್ತಿದೆ. ಕಾಂತಾರ ಚಿತ್ರ ಈಗ ಆಸ್ಕರ್​ ರೇಸ್​​ಗೆ ಎಂಟ್ರಿ ಕೊಟ್ಟಿದೆ. ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಟ ವಿಭಾಗದಲ್ಲಿ ‘ಕಾಂತಾರ’ ಅರ್ಹತೆ ಸುತ್ತನ್ನು ಪಾಸ್ ಮಾಡಿದೆ. ಅಂದರೆ, ಆಸ್ಕರ್ ಸದಸ್ಯರು​ ಮತ ಚಲಾಯಿಸಿದರೆ ‘ಕಾಂತಾರ’ ಸಿನಿಮಾ (Kantara Movie) ಮುಖ್ಯ ನಾಮಿನೇಷನ್​ಗೆ ಎಂಟ್ರಿ ಕೊಡಲಿದೆ. 301 ಸಿನಿಮಾಗಳು ಅರ್ಹತೆ ಸುತ್ತನ್ನು ಪಾಸ್ ಮಾಡಿವೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್​ ಟ್ವೀಟ್ ಮಾಡಿದೆ. ‘ಕಾಂತಾರ ಸಿನಿಮಾ ಎರಡು ಆಸ್ಕರ್ ಅರ್ಹತೆ ಪಡೆದಿರುವ ವಿಚಾರ ತಿಳಿಸಲು ಸಂತಸವಾಗುತ್ತಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ’ ಎಂದು ಬರೆದುಕೊಂಡಿದೆ. ಇತ್ತೀಚೆಗಷ್ಟೇ ‘ಕಾಂತಾರ’ ಸಿನಿಮಾ 100 ದಿನ ಪೂರೈಸಿತ್ತು. ಈ ಸಂತಸವನ್ನು ಚಿತ್ರತಂಡ ಹಂಚಿಕೊಂಡಿತ್ತು.

ಇದನ್ನೂ ಓದಿ:  ಸೂಪರ್ ಸ್ಟಾರ್ ರಜನಿಕಾಂತ್ ಗೆ ಜೊತೆಯಾದ ಜ್ಞಾನವೇಲ್ – 171ನೇ ಚಿತ್ರಕ್ಕೆ ಜೈ ಭೀಮ್ ಖ್ಯಾತಿಯ ನಿರ್ದೇಶಕನಿಂದ ಆ್ಯಕ್ಷನ್ ಕಟ್

ಆಸ್ಕರ್ ಅಕಾಡಮಿ ಪ್ರಶಸ್ತಿಯ ಅರ್ಹತೆ ವಿಭಾಗದಲ್ಲಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಕೂಡ ಆಯ್ಕೆಯಾಗಿದೆ. ನಟನಾ ವಿಭಾಗದಲ್ಲಿ ಈ ಸಿನಿಮಾ ಆಯ್ಕೆಯಾಗಿದ್ದು, ಕನ್ನಡದ ಎರಡು ಚಿತ್ರಗಳು ಈ ಬಾರಿ ಆಸ್ಕರ್ ಅಂಗಳದಲ್ಲಿವೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ನಿರೂಪ್ ಭಂಡಾರಿ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ.

suddiyaana