ಫಲಿಸಲಿಲ್ಲ ಚಿಕಿತ್ಸೆ.. ಸ್ಯಾಂಡಲ್ವುಡ್ ಯುವ ನಟ ಸಂತೋಷ್ ಬಾಲರಾಜ್ಇನ್ನಿಲ್ಲ

ಸ್ಯಾಂಡಲ್ವುಡ್ ನಟ ಸಂತೋಷ್ ಬಾಲರಾಜ್(34) ನಿಧನರಾಗಿದ್ದಾರೆ. ಜಾಂಡೀಸ್ನಿಂದ ಬಳಲುತ್ತಿದ್ದ ನಟ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: ಸಾರಿಗೆ ಬಸ್ ಸಂಚಾರ ಬಂದ್ – ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲೆಸೆತ
ಹಿರಿಯ ನಿರ್ಮಾಪಕ ಆನೆಕಲ್ ಬಾಲ್ ರಾಜ್ ಪುತ್ರ ಸಂತೋಷ್ ಬಾಲರಾಜ್ ಕಳೆದ ಕೆಲವು ದಿನಗಳಿಂದ ಜಾಂಡೀಸ್ನಿಂದ ಬಳಲುತ್ತಿದ್ರು. ನಟ ಸಂತೋಷ್ ಅವರನ್ನ ಕುಮಾರಸ್ವಾಮಿ ಲೇಔಟ್ನ ಸಾಗರ್ ಅಫೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಕೆಲ ದಿನಗಳ ಹಿಂದೆ ನಟ ಕೋಮಾಗೆ ಹೋಗಿದ್ರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ಸಂತೋಷ್ ಬಾಲ್ರಾಜ್ ಅವರು ಅಮ್ಮನ ಜೊತೆಗೆ ವಾಸವಾಗಿದ್ದರು. ಕರಿಯ-2 ಕೆಂಪ, ಗಣಪ, ಬರ್ಕ್ಲಿ, ಸತ್ಯ ಸಿನಿಮಾಗಳಲ್ಲಿ ಸಂತೋಷ್ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಕೆಂಪ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರೂ ಆ ಸಿನಿಮಾದಿಂದ ಹೇಳಿಕೊಳ್ಳುವಂತಹ ಯಶಸ್ಸು ಅವರಿಗೆ ಸಿಕ್ಕಲಿಲ್ಲ. ನಂತರ ನಟಿಸಿದ ಗಣಪ ಹಾಗೂ ಕರಿಯ 2 ಚಿತ್ರ ತಕ್ಕಮಟ್ಟಕ್ಕೆ ಯಶಸ್ಸು ಕಂಡಿದ್ದವು. ನಂತರದ ದಿನಗಳಲ್ಲಿ ಒಂದಷ್ಟು ಸಿನಿಮಾದಲ್ಲಿ ನಟಿಸಿದರೂ ಯಾವ ಚಿತ್ರ ಕೂಡಾ ಅಷ್ಟರ ಮಟ್ಟಿಗೆ ಕೈ ಹಿಡಿಯಲಿಲ್ಲ. ಸಂತೋಷ್ ಅಭಿನಯದ ಸತ್ಯ ಚಿತ್ರ ಇನ್ನೂ ರಿಲೀಸ್ ಆಗ್ಬೇಕಿತ್ತು.

ನೋಡಿರಿ

