ಕರ್ನಾಟಕ ವಿಧಾನಸಭೆ ಚುನಾವಣೆ – ಗಣ್ಯರಿಂದ ಮತದಾನ

ಕರ್ನಾಟಕ ವಿಧಾನಸಭೆ ಚುನಾವಣೆ – ಗಣ್ಯರಿಂದ ಮತದಾನ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಬುಧವಾರ ಬೆಳಗ್ಗೆಯಿಂದಲೇ ಮತದಾನ ಆರಂಭವಾಗಿದೆ. ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು ಮತದಾನ ಮಾಡಿದ್ದಾರೆ. ಸಿದ್ಧಗಂಗಾ ಮಠದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 116ರಲ್ಲಿ ಸಿದ್ದಲಿಂಗ ಶ್ರೀಗಳು ಮತದಾನ ಮಾಡಿದರು.

ಶಿಕಾರಿಪುರದಲ್ಲಿ ಬಿ.ಎಸ್ ಯಡಿಯೂರಪ್ಪ ಮತ್ತು ಮಕ್ಕಳಾದ ಬಿ.ವೈ ವಿಜಯೇಂದ್ರ ಮತ್ತು ಸಂಸದ ಬಿ.ವೈ ರಾಘವೇಂದ್ರ ತಮ್ಮ ಮತ ಚಲಾಯಿಸಿದರು.

ಬೆಂಗಳೂರಿನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಮತಚಲಾಯಿಸಿದರು. ಜಯನಗರದ ಬಿಇಎಸ್ ಕಾಲೇಜಿನ ಮತಗಟ್ಟೆಯಲ್ಲಿ ಕುಟುಂಬ ಸದಸ್ಯರ ಜೊತೆ ಆಗಮಿಸಿ ಮತಚಲಾಯಿಸಿದರು.

ಮೈಸೂರಿನ ರಾಜಮಾತೆ ಪ್ರಮೋದಾದೇವಿಯವರು ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತವನ್ನ ಚಲಾಯಿಸಿದ್ದಾರೆ.

ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ  ದಂಪತಿ ಮತದಾನ ಮಾಡಿದರು.ಬೆಂಗಳೂರಿನ  ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ  ದಂಪತಿ ಮತ ಚಲಾಯಿಸಿದರು. ಈ ವೇಳೆ ಸುಧಾಮೂರ್ತಿ ನೆರೆದಿದ್ದ ಜನರ ಜೊತೆ ಕೆಲಕಾಲ ಮಾತುಕತೆ ನಡೆಸಿದರು.

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023

suddiyaana