ಶುಕ್ರವಾರ ಕರ್ನಾಟಕ ಬಂದ್‌ – ಇಂದು ರಾತ್ರಿಯಿಂದ ತಮಿಳುನಾಡಿಗೆ ಬಸ್ ಸಂಚಾರ ಬಂದ್

ಶುಕ್ರವಾರ ಕರ್ನಾಟಕ ಬಂದ್‌ – ಇಂದು ರಾತ್ರಿಯಿಂದ ತಮಿಳುನಾಡಿಗೆ ಬಸ್ ಸಂಚಾರ ಬಂದ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಬಿಟ್ಟಿರುವುದನ್ನು ಖಂಡಿಸಿ ಕನ್ನಡ ಕನ್ನಡ ಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕರ್ನಾಟಕ ಬಂದ್‌ಗೆ 1,900 ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದು, ಕರ್ನಾಟಕದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಬಂಧಿಸಲಾಗುತ್ತಿದೆ. ಬಂದ್‌ ಹಿನ್ನೆಲೆ ಗುರುವಾರ ರಾತ್ರಿಯಿಂದಲೇ ತಮಿಳುನಾಡು ಸಾರಿಗೆ ಬಸ್ ಗಳ ಸಂಚಾರ ಬಂದ್ ಮಾಡಲಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಶುಕ್ರವಾರ ಸಂಪೂರ್ಣ ಸ್ತಬ್ಧವಾಗಲಿದ್ಯಾ ಕರುನಾಡು? – ಕರ್ನಾಟಕ ಬಂದ್‌ಗೆ ಯಾರ್ಯಾರ ಬೆಂಬಲ?

ಕರ್ನಾಟಕ ಬಂದ್‌ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು To ತಮಿಳುನಾಡು ಸಂಚಾರ ಮಾಡುವ ತಮಿಳುನಾಡು ಸಾರಿಗೆಯ 350ಕ್ಕೂ ಹೆಚ್ಚು ಬಸ್‍ಗಳು ಶುಕ್ರವಾರ ಸ್ಥಗಿತವಾಗಲಿವೆ. ತಮಿಳುನಾಡು ಸಾರಿಗೆ ಬಸ್ ಗಳು ರಾತ್ರಿ 10 ಗಂಟೆಗೆ ಸಂಪೂರ್ಣ ಓಡಾಟ ನಿಲ್ಲಿಸಲಿವೆ.

ತಮಿಳುನಾಡಿನಿಂದ ಆಗಮಿಸುವ ಬಸ್‍ಗಳು ರಾತ್ರಿ 10 ಗಂಟೆ ವೇಳೆಗೆ ಕರ್ನಾಟಕ ಗಡಿ ಪ್ರವೇಶಿಸಿ ಮತ್ತೆ ವಾಪಸ್ ಆಗಲಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ಸ್ಯಾಟಲೈಟ್, ಶಾಂತಿನಗರ ಬಸ್ ನಿಲ್ದಾಣದಿಂದ ತಮಿಳುನಾಡಿನ ವಿವಿಧ ಭಾಗಗಳಿಗೆ ಸಂಚಾರ ಮಾಡುವ ತಮಿಳುನಾಡು ಸಾರಿಗೆ ಬಸ್ ಸಂಚಾರ ನಿಲ್ಲಿಸಿವೆ ಎಂದು ಮೂಲಗಳು ತಿಳಿಸಿವೆ.

Shwetha M