ಲೂಟಿ ಹೊಡೆಯಲು ಬೆಂಗಳೂರಿನಲ್ಲಿ ಸುರಂಗ ಮಾರ್ಗ! – ಕಾಂಗ್ರೆಸ್ ವಿರುದ್ಧ ಬಿಜೆಪಿ ವಿಡಿಯೋ ಬಿಡುಗಡೆ

ಲೂಟಿ ಹೊಡೆಯಲು ಬೆಂಗಳೂರಿನಲ್ಲಿ ಸುರಂಗ ಮಾರ್ಗ! – ಕಾಂಗ್ರೆಸ್ ವಿರುದ್ಧ ಬಿಜೆಪಿ ವಿಡಿಯೋ ಬಿಡುಗಡೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ವಾಹನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ 65 ಕಿ.ಮೀ ಉದ್ದದ ಸುರಂಗ ಮಾರ್ಗವನ್ನು ನಿರ್ಮಾಣ ಮಾಡಲು ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಈ ಬೆನ್ನಲ್ಲೇ ರಾಜ್ಯ ಬಿಜೆಪಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದೆ. ಲೂಟಿ ಹೊಡೆಯುವ ಉದ್ದೇಶದಿಂದ ಬೆಂಗಳೂರಿನಲ್ಲಿ ಸುರಂಗ ಮಾರ್ಗ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪ ಮಾಡಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ, ʼಲೂಟಿ ಹೊಡೆಯಲು ಸುರಂಗ ಮಾರ್ಗʼ ಎಂಬ ಶಿರ್ಷಿಕೆಯಡಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಇಸ್ರೇಲ್ ನಿರ್ನಾಮ ಮಾಡಲು ಹಮಾಸ್ ಗಾಜಾದಲ್ಲಿ 500 ಕಿ.ಮೀ ಸುರಂಗ ನಿರ್ಮಾಣ ಮಾಡಿದ್ದಾರೆ. ಅದೇ ರೀತಿಯಲ್ಲಿ ಕರ್ನಾಟವನ್ನು ದೋಚಲು ಸುರಂಗ ತೋಡುವ ಕೆಲಸಕ್ಕೆ ಕೈಹಾಕುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಇದನ್ನೂ ಓದಿ: ವರ್ತೂರು ಸಂತೋಷ್ ಅರೆಸ್ಟ್.. ಸೆಲೆಬ್ರಿಟಿಗಳಿಗೆ ಬರೀ ನೋಟಿಸ್ – ಹುಲಿ ಉಗುರಿನ ಕೇಸ್​ ನಲ್ಲಿ ರೈತನಿಗೊಂದು ನ್ಯಾಯ, ಸ್ಟಾರ್ಸ್ ಗೊಂದು ನ್ಯಾಯ!

ಅಷ್ಟೇ ಅಲ್ಲದೆ, ಈ ಸುರಂಗ ಮಾರ್ಗದಲ್ಲಿ ಯಾರಿಗೆ ಎಷ್ಟು ಪಾಲು ಎಂಬ ನಿಟ್ಟಿನಲ್ಲಿ ಜಂಗೀಕುಸ್ತಿ ನಡೆಯುತ್ತಿದೆ ಎಂದು ಆರೋಪ ಮಾಡಿರುವ ಬಿಜೆಪಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದೆ.

ಡಿಕೆಶಿ ಹಾಗೂ ಸತೀಶ್ ಜಾರಕಿಹೊಳಿ ನಡುವಿನ ತಿಕ್ಕಾಟಕ್ಕೆ ಪ್ರಮುಖ ಕಾರಣವಾಗಿರುವುದು ಭ್ರಷ್ಟಾಚಾರ ಮಾಡಲು ಬೆಂಗಳೂರು ನಗರದಲ್ಲಿ ತೋಡಲು ಹೊರಟಿರುವ ಸರಂಗ ಮಾರ್ಗವಾಗಿದೆ ಎಂದು ಬಿಜೆಪಿ ಈ ವಿಡಿಯೋದಲ್ಲಿ ಆರೋಪಿಸಿದೆ.

ಕಿ. ಮೀಟರ್‌ಗೆ 450 ಕೋಟಿ ಖರ್ಚು ಮಾಡಿ 190 ಕಿ. ಮೀಗೆ ಲಕ್ಷ ಕೋಟಿ ರೂಪಾಯಿ ಖರ್ಚು ಆಗುತ್ತದೆ. ಈಗಾಗಲೇ 65 ಕಿ.ಮೀ ಸುರಂಗ ಕೊರೆಯಲು ಆದಷ್ಟು ಬೇಗ ಟೆಂಡರ್ ಕರೆದು ತಮ್ಮ ಜೇಬು ತುಂಬಿಸಿಕೊಳ್ಳುವ ಉದ್ದೇಶವನ್ನು ಡಿಕೆಶಿ ಹಾಗೂ ಸತೀಶ್ ಜಾರಕಿಹೊಳಿ ಹೊಂದಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.

Shwetha M