ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ – ‌ಭ್ರೂಣ ಹತ್ಯೆ ಹೇಗೆ ನಡೆಯುತ್ತೆ ಎಂದು ಎಳೆಎಳೆಯಾಗಿ ಬಿಚ್ಚಿಟ್ಟ ಪುರಸಭೆ ಸದಸ್ಯ!

ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ – ‌ಭ್ರೂಣ ಹತ್ಯೆ ಹೇಗೆ ನಡೆಯುತ್ತೆ ಎಂದು ಎಳೆಎಳೆಯಾಗಿ ಬಿಚ್ಚಿಟ್ಟ ಪುರಸಭೆ ಸದಸ್ಯ!

ರಾಜ್ಯದಲ್ಲಿ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಮಂಡ್ಯ ತಾಲೂಕಿನ ಹುಲ್ಲೇನಹಳ್ಳಿ ಹಾಡ್ಯದಲ್ಲಿ 2 ವರ್ಷಗಳಲ್ಲಿ ಬರೋಬ್ಬರಿ 900 ಹೆಣ್ಣು ಭ್ರೂಣ ಹತ್ಯೆ ಮಾಡಿರುವ ವಿಚಾರ ಬಯಲಾಗಿದ್ದು, ಈ ಸಂಬಂಧ 9 ಮಂದಿಯನ್ನು ಅರೆಸ್ಟ್‌ ಮಾಡಲಾಗಿದೆ. ಇದೀಗ ಈ ವಿಚಾರವಾಗಿ ಮಂಡ್ಯದ ಆರೋಗ್ಯಧಿಕಾರಿಗಳ ವಿರುದ್ದ ಶ್ರೀರಂಗಪಟ್ಟಣ ಪುರಸಭೆ ಸದಸ್ಯ ನಂದೀಶ್ ಗಂಭೀರ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೇ ಭ್ರೂಣ ಹತ್ಯೆ ಬಗ್ಗೆ ಎಳೆಎಳೆಯಾಗಿ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 100 ಗಂಡು ಮಕ್ಕಳಾದ್ದರೆ, 60 ಹೆಣ್ಣ ಮಕ್ಕಳಿದ್ದಾರೆ. 2021ರಲ್ಲೇ ನನಗೆ ಮಾಹಿತಿ ಇತ್ತು. ಅದರೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದರು. ಮಂಡ್ಯದ ನರ್ಸಿಂಗ್ ಹೊಂಗಳಲ್ಲಿ ಭ್ರೂಣ ಪತ್ತೆ ಮಾಡುತ್ತಿದ್ದರು. ಇದರಲ್ಲಿ ಏಜೆಂಟ್​ಗಳ ದೊಡ್ಡ ತಂಡವೇ ಇದೆ. ಮೊದಲಿಗೆ ಭ್ರೂಣ ಪತ್ತೆ ಮಾಡುತ್ತಾರೆ. ನಂತರ ಹೆಣ್ಣು ಭ್ರೂಣವಾದರೆ ಅಮೌಂಟ್ ಫಿಕ್ಸ್ ಮಾಡುತ್ತಾರೆ. ಇದರಲ್ಲಿ ಆಸ್ಪತ್ರೆ ವೈದ್ಯರು ಮತ್ತು ಏಜೆಂಟ್​ರ ದೊಡ್ಡ ಜಾಲಾವೇ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: 2 ವರ್ಷದಲ್ಲಿ ಸುಮಾರು 900 ಹೆಣ್ಣು ಭ್ರೂಣ ಹತ್ಯೆ! – ಐವರು ವೈದ್ಯರ ಸೇರಿ 9 ಮಂದಿ ಅರೆಸ್ಟ್

ನಾನು ಮೆಡಿಕಲ್ ಸ್ಟೋರ್ ಇಟ್ಟಿದ್ದೇನೆ. ಮೆಡಿಕಲ್ ಸ್ಟೋರ್​ಗೆ ಅಬಾರ್ಷನ್ ಮಾತ್ರೆ ಕೇಳಿಕೊಂಡು ಬರುತ್ತಿದ್ದರು. ನಾವು ಮಾತ್ರೆಯನ್ನ ಕೊಡುತ್ತಿರಲಿಲ್ಲ. ನಂತರ ಮಂಡ್ಯದಲ್ಲಿ ಏಜೆಂಟ್ ಮೂಲಕ‌ ಅಬಾರ್ಷನ್ ಮಾಡಿಸಿಕೊಳ್ಳುತ್ತಿರುವುದು ಗೊತ್ತಾಯಿತು. ಅವರನ್ನ ವಿಶ್ವಾಸಕ್ಕೆ ತೆಗೆದುಕೊಂಡು ವಿಚಾರ ಮಾಡಿದಾಗ ಹಣ ಕೊಟ್ಟು ಅಬಾರ್ಷನ್ ಮಾಡಿಸಿರುವುದಾಗಿ ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿರುವ ನರ್ಸ್​ಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಕೆ.ಆರ್ ಪೇಟೆ ಭಾಗದಲ್ಲಿ ಹೆಚ್ಚು ಈ ಕೃತ್ಯ ನಡೆದಿದೆ. ನಗರ ಪ್ರದೇಶದಲ್ಲಿ ಕಡಿಮೆ ನಡೆದಿದೆ. ಈ ಹಿಂದೆ ಅಬಾರ್ಷನ್​ ಮಾತ್ರೆಗಳನ್ನ ಕೊಡುತ್ತಿದ್ದರು. ಸದ್ಯ ಸರ್ಕಾರ ಮಾತ್ರೆಗಳನ್ನ ಬ್ಯಾನ್ ಮಾಡಿದೆ. ಈ ಪ್ರಕರಣವನ್ನ ಸಿಐಡಿಗೆ ವಹಿಸಬೇಕು. ಆರೋಗ್ಯ ಅಧಿಕಾರಿಗಳು ಸೇರಿದಂತೆ ಅನೇಕ ದೊಡ್ಡ ದೊಡ್ಡ ವ್ಯಕ್ತಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ಮೈಸೂರು ಜಿಲ್ಲಾ DHO ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಎಲ್ಲವು ಈಗ ತನಿಖೆ ಹಂತದಲ್ಲಿದೆ. ತನಿಖೆಯಲ್ಲಿ ಯಾರು ಭ್ರೂಣ ಹತ್ಯೆ ಮಾಡಿಸಿದ್ದಾರೆ ಅವರ ಮಾಹಿತಿ ಕಲೆಹಾಕಲಾಗುತ್ತಿದೆ. ಅವರ ವಿರುದ್ಧ ಕೂಡ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಆ ಮೂಲಕ ಅಬಾರ್ಷನ್ ಮಾಡಿಸಿಕೊಂಡು 900 ಪೋಷಕರ ಎದೆಯಲ್ಲಿ ಢವ ಢವ ಶುರುವಾಗಿದೆ.

ಭ್ರೂಣ ಹತ್ಯೆಯಿಂದ 5 ಕೋಟಿ ಹಣ ಸಂಪಾದನೆ!

ಕಳೆದ ಎರಡು ವರ್ಷದಲ್ಲಿ ಆರೋಪಿಗಳು ಭ್ರೂಣ ಹತ್ಯೆ ನಡೆಸಿ 5 ಕೋಟಿ ಹಣ ಸಂಪಾದನೆ ಮಾಡಿದ್ದಾರಂತೆ. ಭ್ರೂಣ ಯಾವುದು ಅಂತಾ ಪತ್ತೆ ಮಾಡೋಕೆ 20 ರಿಂದ 25 ಸಾವಿರ ಚಾರ್ಜ್ ಮಾಡುತ್ತಿದ್ದರು. ಭ್ರೂಣ ಹೊರ ತೆಗೆಯೋಕೆ 20 ರಿಂದ 25 ಸಾವಿರ ಚಾರ್ಜ್ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ ಅರೋಪಿಗಳು ಬಾಯಿಬಿಟ್ಟಿದ್ದಾರೆ.

ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಲರ್ಟ್, ಟಾಸ್ಕ್ ಪೋರ್ಸ್ ರಚನೆ!

ರಾಜ್ಯದಲ್ಲಿ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ವರದಿಯಾಗುತ್ತಿದ್ದಂತೆ ಮೈಸೂರು ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ. ಮೈಸೂರು ಜಿಲ್ಲೆಯ ನರ್ಸಿಂಗ್ ಹೋಂ, ಖಾಸಗಿ ಆಸ್ಪತ್ರೆ ಕ್ಲಿನಿಕ್ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಕ್ರಮ ತಡೆಗಟ್ಟಲು ಜಿಲ್ಲೆಯಲ್ಲಿ ಟಾಸ್ಕ್ ಪೋರ್ಸ್ ಪಡೆಯನ್ನು ನಿಯೋಜಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಟಾಸ್ಕ್ ಪೋರ್ಸ್ ಕಾರ್ಯನಿರ್ವಹಿಸಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Shwetha M