ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿಯೊಂದು ದ್ರಾಕ್ಷಿಗೆ ಆಸೆ ಪಟ್ಟಂತೆ! – ಬಿಜೆಪಿ, ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವ್ಯಂಗ್ಯ

ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿಯೊಂದು ದ್ರಾಕ್ಷಿಗೆ ಆಸೆ ಪಟ್ಟಂತೆ! – ಬಿಜೆಪಿ, ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಯಾಗುತ್ತಿದೆ. ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಪೆನ್‌ಡ್ರೈವ್‌ ಬಾಂಬ್‌ ಸಿಡಿಸಿದ್ದರು. ಇದಾದ ಬಳಿಕ ಬಿಜೆಪಿ ಹಾಗೂ ಜೆಡಿಎಸ್‌ ಎರಡು ಪಕ್ಷಗಳು ಮೈತ್ರಿ ಮಾಡಿಕೊಳ್ಳಲಿವೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವಿಚಾರವನ್ನಿಟ್ಟುಕೊಂಡು ರಾಜ್ಯ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. ಬಹುಮತದೊಂದಿಗೆ ರಚಿಸಿರುವ ಸರ್ಕಾರವನ್ನು ಬೀಳಿಸುತ್ತೇವೆ ಎಂಬುದು ಹಗಲುಗನಸು. ನರಿಯೊಂದು ದ್ರಾಕ್ಷಿಗೆ ಆಸೆಪಟ್ಟಂತೆ ಎಂದು ಪ್ರತಿಪಕ್ಷಗಳ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಇದನ್ನೂ ಓದಿ: ಕಾಲೇಜು ಶೌಚಗೃಹದಲ್ಲಿ ವಿದ್ಯಾರ್ಥಿನಿ ವಿಡಿಯೋ ಸೆರೆ ಪ್ರಕರಣ – ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಕನ್ನಡಿಗರು ಅತೀವ ಭರವಸೆಯನ್ನಿಟ್ಟು ಗೆಲ್ಲಿಸಿದ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದರೆ ಜನರೇ ದಂಗೆ ಏಳುತ್ತಾರೆ. ಈಗ ಸಿಂಗಾಪುರಕ್ಕೆ ಹೋದವರು ನಂತರ ಮಂಗಾಪುರಕ್ಕೆ ಓಡುವ ಸ್ಥಿತಿ ಉಂಟಾಗಲಿದೆ. ಪದೇ ಪದೇ ಪ್ರಜಾಪ್ರಭುತ್ವದ ಆಶಯಗಳ ವಿರುದ್ಧ ಕೆಲಸ ಮಾಡುವ ಬಿಜೆಪಿ ಈಗಲಾದರೂ ಜನರ ತೀರ್ಪನ್ನು ಗೌರವಿಸುವುದನ್ನು ಕಲಿಯಲಿ’ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಜೆಡಿಎಸ್ ನಾಯಕರು ಬಿಜೆಪಿಯ ಲೆಟರ್ ಹೆಡ್ ಮೇಲೆ ಸಹಿ ಮಾಡಿ ತಮ್ಮದು ಅಡ್ರೆಸ್ ಇಲ್ಲದ ಪಕ್ಷ ಎಂದು ಸಾಬೀತು ಮಾಡಿದ್ದರು. ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿಯವರು ಜೆಡಿಎಸ್ ಕಚೇರಿಗೆ ತೆರಳಿ, ಪತ್ರಿಕಾಗೋಷ್ಠಿಗೆ ಜೆಡಿಎಸ್ ನೆರವು ಪಡೆದು ತಮಗೆ ದಮ್ಮು, ತಾಕತ್ತು ಇಲ್ಲ ಎಂದು ಸಾಬೀತು ಮಾಡಿದ್ದರು. ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ ಎಂಬಂತಹ ಸ್ಥಿತಿಯಲ್ಲಿರುವ ವಿಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿಯೊಂದು ದ್ರಾಕ್ಷಿಗೆ ಆಸೆ ಪಟ್ಟಂತೆ! ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

suddiyaana