ಬಿಸಿಲಿನ ಝಳದಿಂದ ನಲುಗಿದ ಕರುನಾಡು – ರಾಜ್ಯದಲ್ಲಿ ಉಷ್ಟ ಅಲೆ ಮತ್ತಷ್ಟು ಹೆಚ್ಚಳ!

ಬಿಸಿಲಿನ ಝಳದಿಂದ ನಲುಗಿದ ಕರುನಾಡು – ರಾಜ್ಯದಲ್ಲಿ ಉಷ್ಟ ಅಲೆ ಮತ್ತಷ್ಟು ಹೆಚ್ಚಳ!

ರಾಜ್ಯದಲ್ಲಿ ದಿನ ದಿನಕ್ಕೆ ಬಿಸಿಲಿನ ತೀವ್ರತೆ ಹೆಚ್ಚುತ್ತಿದೆ. ಬಿಸಿಲಿನ ಝಳದಿಂದಾಗಿ ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಸುಡು ಸುಡು ಬಿಸಿಲಿಗೆ ಜನರು  ಹೈರಾಣು ಆಗಿದ್ದಾರೆ. ಬಿಸಿಲಿನಿಂದ ಬೆಂಡಾಗಿರುವ ಜನರಿಗೆ ಮತ್ತೆ ಶಾಕಿಂಗ್‌ ಸುದ್ದಿಯೊಂದಿದೆ. ಮುಂದಿನ ಎರಡು ದಿನಗಳ ಕಾಲ ಉಷ್ಣ ಅಲೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ‘ರಾಮಾಯಣ’ದಲ್ಲಿ ಸಾಯಿ ಪಲ್ಲವಿ ಸೀತೆ ಪಾತ್ರ ಮಾಡಿದ್ರೆ ಸಿನಿಮಾ ನೋಡಲ್ಲ ಎಂದ ಫ್ಯಾನ್ಸ್‌ – ಕಾರಣವೇನು ಗೊತ್ತಾ?

ರಾಜ್ಯದ ಕಲಬುರಗಿ, ಬಾಗಲಕೋಟೆ, ತುಮಕೂರು, ಕೋಲಾರ ಸೇರಿದಂತೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಹೆಚ್ಚಾಗಲಿದೆ  ಎಂದು ಹವಾಮಾನ ಇಲಾಖೆ ತಿಳಿಸಿದೆ.ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 43.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹಲವು ಭಾಗಗಳಲ್ಲಿ ಬಿಸಿಲಿನ ವಾತಾವರಣ ಮೇ 5ರವರೆಗೂ  ಮುಂದುವರಿಯಲಿದೆ. ಶಾಖ ನಗರಿ ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ 43 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಲಿದೆ. ಮೇ 3 ರವರೆಗೂ ಬಿಸಿಲಿನ ಶಾಖ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರದಲ್ಲಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Shwetha M

Leave a Reply

Your email address will not be published. Required fields are marked *