ಕಾವೇರಿ ನಮ್ಮದು… ನಾನು ಸಹ ಕಾವೇರಿಗಾಗಿ ಹೋರಾಟ ಮಾಡುವೆ! – ಅನಾರೋಗ್ಯ ಲೆಕ್ಕಿಸದೆ ಮಂಡ್ಯಕ್ಕೆ ಹೊರಟ ನಟಿ ಲೀಲಾವತಿ

ಕಾವೇರಿ ನಮ್ಮದು… ನಾನು ಸಹ ಕಾವೇರಿಗಾಗಿ ಹೋರಾಟ ಮಾಡುವೆ! –  ಅನಾರೋಗ್ಯ ಲೆಕ್ಕಿಸದೆ ಮಂಡ್ಯಕ್ಕೆ ಹೊರಟ ನಟಿ ಲೀಲಾವತಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದೆ. ತಮಿಳುನಾಡಿಗೆ ನೀರು ಹರಿಸಬಾರದು ಎಂದು ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇದೀಗ ಕಾವೇರಿ ಹೋರಾಟಕ್ಕೆ ತಮ್ಮ ಅನಾರೋಗ್ಯವನ್ನೂ ಲೆಕ್ಕಿಸದೆ ಹಿರಿಯ ನಟಿ ಎಂ.ಲೀಲಾವತಿ ಇಳಿದಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಮನೆಯಲ್ಲಿ ಮಾತನಾಡಿದ ಹಿರಿಯ ನಟಿ ಎಂ.ಲೀಲಾವತಿ, ಕಾವೇರಿ ನಮ್ಮದು. ನಾನು ಸಹ ಕಾವೇರಿ ಹೋರಾಟಕ್ಕೆ ಹೊರಡುವೆ ನಮ್ಮ ಜಲ, ನಮ್ಮ ನೆಲ, ನಮ್ಮ ನುಡಿ, ಎಲ್ಲಾ ಕನ್ನಡಕೊಸ್ಕರ. ಕಾವೇರಿ ನೀರಿಗಾಗಿ ನಾನು ಹೋರಾಟಕ್ಕೆ ಬರುವೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ನೆಲಮಂಗಲದ ಮನೆಯಿಂದ ಮಂಡ್ಯ ಪ್ರತಿಭಟನೆ ಸ್ಥಳಕ್ಕೆ ಮಗ ವಿನೋದ್ ರಾಜ್  ಜೊತೆಗೆ ಹೊರಟಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕಾವೇರಿದ ಕಾವೇರಿ ಕಿಚ್ಚು – ಸೆ. 26 ರಂದು ಸ್ತಬ್ಧವಾಗಲಿದೆ ರಾಜ್ಯ ರಾಜಧಾನಿ

ಕಾವೇರಿ ಹೋರಾಟ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಚಿತ್ರರಂಗದ ನಟ-ನಟಿಯರು ಕಾವೇರಿ ಹೋರಾಟಕ್ಕೆ ಸಾಥ್ ನೀಡುತ್ತಿಲ್ಲ ಎನ್ನುವ ಕೂಗು ಎದ್ದಿದೆ. ಈ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಕಾವೇರಿ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.

ಕಾವೇರಿ ಸಮಸ್ಯೆ ಇವಾಗಿನಿಂದ ಇರೋದಲ್ಲ, ಸುಮಾರು ವರ್ಷಗಳಿಂದ ಇದೆ. ಚಿತ್ರರಂಗದ ಹಿರಿಯ ನಟರಿದ್ದಾರೆ. ಅವರು ಒಂದು ನಿರ್ಧಾರ ಕೈಗೊಂಡು ಕಾವೇರಿ ಹೋರಾಟಕ್ಕೆ ಕರೆ ನೀಡಿದರೆ, ಅವರ ಮಾರ್ಗದರ್ಶನದಲ್ಲಿ ನಾವು ನಡೆಯುತ್ತೇವೆ. ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಕೂಡ ಸದಾ ಇದೆ ಎಂದು ನಟ ಸಹಮತ ಸೂಚಿಸಿದ್ದಾರೆ.

Shwetha M