ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ – ಮೂವರು ಸಾವು, 9 ಮಂದಿಗೆ ಗಾಯ

ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ – ಮೂವರು ಸಾವು, 9 ಮಂದಿಗೆ ಗಾಯ

ತಿರುವನಂತಪುರಂ: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯೊಬ್ಬ ಸಹ ಪ್ರಯಾಣಿಕನೊಂದಿಗೆ ಜಗಳವಾಡಿ ಆತನಿಗೆ ಬೆಂಕಿ ಹಚ್ಚಿರುವ ಘಟನೆ ಕೇರಳದ  ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ.

ಭಾನುವಾರ ರಾತ್ರಿ ಸುಮಾರು 9. 30 ರ ವೇಳೆಗೆ ಈ ಘಟನೆ ನಡೆದಿದೆ. ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲು ಕೋಝಿಕ್ಕೋಡ್ ನಗರವನ್ನು ದಾಟಿ ಕೇರಳದ ಕೊರಾಪುಳ ರೈಲ್ವೆ ಸೇತುವೆಯನ್ನು ತಲುಪಿತ್ತು. ಈ ವೇಳೆ ವ್ಯಕ್ತಿಯೊಬ್ಬ ಸಹ ಪ್ರಯಾಣಿಕನೊಂದಿಗೆ ಜಗಳವಾಡಿದ್ದಾನೆ. ನಂತರ ಆತನಿಗೆ ಬೆಂಕಿ ಹಚ್ಚಿದ್ದು, ಸಮಾರು  9 ಮಂದಿ ಗಾಯಗೊಂಡಿದ್ದಾರೆ. ಘಟನೆ ನಡೆದ ಕೂಡಲೇ ಬೆಂಕಿ ಹಚ್ಚಿದ ವ್ಯಕ್ತಿ ಪರಾರಿಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಶಾಸಕರ ರಾಜೀನಾಮೆ – ಚುನಾವಣೆ ಹೊತ್ತಲ್ಲೇ ‘ಜಂಪಿಂಗ್’ ಪಾಲಿಟಿಕ್ಸ್!

ರೈಲು ಕಣ್ಣೂರು ತಲುಪಿದಾಗ ಸಹ ಪ್ರಯಾಣಿಕರು ಘಟನೆ ನಂತರ ಮಹಿಳೆ ಮತ್ತು ಮಗು ಕಾಣೆಯಾಗಿದೆ ಅಂತಾ ದೂರಿದರು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಮಹಿಳೆ ಹಾಗೂ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮಹಿಳೆ, ಮಗು ಹಾಗೂ ಓರ್ವ ವ್ಯಕ್ತಿಯ ಮೃತದೇಹಗಳು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಬೆಂಕಿಯನ್ನು ನೋಡಿದ ನಂತರ ಆ ಮೂವರು ರೈಲಿನಿಂದ ಇಳಿಯಲು ಪ್ರಯತ್ನಿಸಿ ಬಿದ್ದಿರಬಹುದು ಅಂತಾ ಪೊಲೀಸರು ಶಂಕಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ಕೋಯಿಕ್ಕೋಡ್ ನಗರ ಪೊಲೀಸರು ಮತ್ತು ರೈಲ್ವೇ ರಕ್ಷಣಾ ಪಡೆ ತನಿಖೆ ಆರಂಭಿಸಿದೆ.  ಆರೋಪಿ ಇನ್ನೂ ಪತ್ತೆ ಆಗಿಲ್ಲ. ಆದರೆ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದು, ಸಿಸಿಟಿವಿಗಳನ್ನು ಪರಿಶೀಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

suddiyaana