ಸಕ್ಕರೆ ನಾಡಿನಿಂದ ಹೆಚ್‌ಡಿಕೆ ಸ್ಪರ್ಧೆ ಫಿಕ್ಸ್? – ಮಂಗಳವಾರ ಮಂಡ್ಯ‌ ಮೈತ್ರಿ ಅಭ್ಯರ್ಥಿ ಘೋಷಣೆ

ಸಕ್ಕರೆ ನಾಡಿನಿಂದ ಹೆಚ್‌ಡಿಕೆ ಸ್ಪರ್ಧೆ ಫಿಕ್ಸ್? – ಮಂಗಳವಾರ ಮಂಡ್ಯ‌ ಮೈತ್ರಿ ಅಭ್ಯರ್ಥಿ ಘೋಷಣೆ

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಎಲ್ಲಾ ರಾಜಕೀಯ ಪಕ್ಷಗಳು ನಾನಾ ಸರ್ಕಸ್‌ ಮಾಡುತ್ತಿವೆ.  ಆದರೆ ಸಕ್ಕರೆ ನಾಡು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಮೈತ್ರಿ ಅಭ್ಯರ್ಥಿ ಯಾರು ಎಂದು ಇನ್ನೂ ಫೈನಲ್‌ ಆಗಿಲ್ಲ. ಮೈತ್ರಿ ಅಭ್ಯರ್ಥಿಯ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.  ಈ ಕುತೂಹಲಕ್ಕೆ ಮಂಗಳವಾರ ತೆರೆ ಬೀಳಲಿದೆ.

ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ ಚಿನ್ನದಂಥ ಗೆಲುವು – ಪಂಜಾಬ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ರೋಚಕ ಜಯ

ಹೌದು, ಇಷ್ಟು ದಿನಗಳ ಕಾಲ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ  ಆಗ್ತಾರಾ ಅಥವಾ ನಿಖಿಲ್ ಕುಮಾರಸ್ವಾಮಿ ಆಗುತ್ತಾರಾ ಎಂಬ ಪ್ರಶ್ನೆಗಳು ಎದ್ದಿದ್ದವು. ಇದೀಗ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರೇ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮಂಡ್ಯ ಜಿಲ್ಲೆಯ ಜೆಡಿಎಸ್‌ ನಾಯಕರು ಹಾಗೂ ಕಾರ್ಯಕರ್ತರು ಒತ್ತಡ ಏರಿದಾಗಲೇ ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ಧೆ ಮಾಡುವ ಮನಸ್ಸು ಮಾಡಿದ್ರು. ಆದರೆ ರಾಮನಗರ ಜಿಲ್ಲೆಯ ಮುಖಂಡರು‌ ಹಾಗೂ ಕಾರ್ಯಕರ್ತರು ಮಂಡ್ಯ ಸ್ಪರ್ಧೆ ಬೇಡಾ. ರಾಮನಗರದಲ್ಲಿಯೇ ಕುಮಾರಸ್ವಾಮಿ ಇರಬೇಕು. ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಹೇಳಿದ್ರು. ಹೀಗಾಗಿ ಕುಮಾರಸ್ವಾಮಿ ಅವರು ಮಂಡ್ಯ ಸ್ಪರ್ಧೆ ವಿಚಾರದಲ್ಲಿ ಸ್ವಲ್ಪ ಗೊಂದಲದಲ್ಲಿ‌ ಇದ್ದರು.

ಸೋಮವಾರ ರಾಮನಗರ ಜಿಲ್ಲೆಯ ಮುಖಂಡರು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನ ತಮ್ಮ ನಿವಾಸಕ್ಕೆ ಕರೆದು ಕುಮಾರಸ್ವಾಮಿ ಮಾತನಾಡಿದ್ದಾರೆ. ಈ ವೇಳೆ ಮಂಡ್ಯದಲ್ಲಿ ಸ್ಪರ್ಧೆ ಮಾಡುವ ಅನಿವಾರ್ಯತೆ ಬಗ್ಗೆ ಕಾರ್ಯಕರ್ತರಿಗೆ ಹೆಚ್‌ಡಿಕೆ ತಿಳಿಸಿದ್ದಾರೆ. ಬಳಿಕ ರಾಮನಗರ ಜಿಲ್ಲೆಯ ಜನರು ಮಂಡ್ಯದಲ್ಲಿ ಕುಮಾರಸ್ವಾಮಿ ಅವರ ಸ್ಪರ್ಧೆಗೆ ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಮಂಡ್ಯದಿಂದ ಕುಮಾರಸ್ವಾಮಿ ಅವರ ಸ್ಪರ್ಧೆ ಪಕ್ಕ ಆಗಿದೆ.  ಮಂಗಳವಾರ ಅಧಿಕೃತವಾಗಿ ಘೋಷಣೆಯಾಗಲಿದೆ.

Shwetha M