ಬೆಂಗಳೂರಿನಿಂದ ಸೋಲದೇವನಹಳ್ಳಿಗೆ ಹೊರಟ ಲೀಲಾವತಿ ಪಾರ್ಥೀವ ಶರೀರ

ಬೆಂಗಳೂರಿನಿಂದ ಸೋಲದೇವನಹಳ್ಳಿಗೆ ಹೊರಟ ಲೀಲಾವತಿ ಪಾರ್ಥೀವ ಶರೀರ

ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೀಲಾವತಿ ಶುಕ್ರವಾರ ನಿಧನರಾದ್ದಾರೆ. ಬೆಂಗಳೂರಿನ ನೆಲಮಂಗಲದ ಡಾ.ಬಿ.ಆರ್. ಅಂಬೇಡ್ಕ‌ರ್ ಮೈದಾನದಲ್ಲಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಇಡಲಾಗಿದ್ದು ಸ್ಯಾಂಡಲ್‌ವುಡ್‌ನ ನಟ, ನಟಿಯರು ಹಾಗೂ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ. ಇದೀಗ ಹಿರಿಯ ನಟಿ ಲೀಲಾವತಿ ಅವರ ಪಾರ್ಥೀವ ಶರೀರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಿಂದ ನೆಲಮಂಗಲದ ಸೋಲದೇವನಹಳ್ಳಿಗೆ ಹೊರಟಿದೆ.

ಇದನ್ನೂ ಓದಿ: ಲೀಲಾವತಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ

ಲೀಲಾವತಿ ಅವರ ಅಂತ್ಯ ಸಂಸ್ಕಾರವನ್ನು ಸರಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ನೆರವೇರಿಸಲಾಗುತ್ತಿದೆ. ನಟಿ ಲೀಲಾವತಿ ಅವರ ಅಂತ್ಯಕ್ರಿಯೆ ಹಿಂದೂ ಸಂಪ್ರದಾಯದಂತೆ ನಡೆಯಲಿದೆ.  ಸರಕಾರ ಮತ್ತು ಲೀಲಾವತಿ ಅವರ ಕುಟುಂಬದೊಂದಿಗೆ ಚರ್ಚಿಸಿ ಈ  ತೀರ್ಮಾನ ತೆಗೆದುಕೊಳ್ಳಲಾಗಿದೆ. ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು, ಮಧ್ಯಾಹ್ನ 3.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತಿದೆ.

ಲೀಲಾವತಿ ಅಂತಿಮ ದರ್ಶನ ಪಡೆದ ಸಿನಿತಾರೆಯರು

ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್  ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿತ್ತು. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು, ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆದರು. ನಂತರ ಬೆಂಗಳೂರಿಗೆ ಅವರ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಗಿತ್ತು. ನಟಿ ತಾರಾ, ಎಸ್‌ ನಾರಾಯಣ್‌, ಶ್ರೀನಾಥ್‌, ಉಪೇಂದ್ರ ಸೇರಿದಂತೆ ಹಲವು ಸಿನಿಮಾ ತಾರೆಯರು ಪಾರ್ಥೀವ ಶರೀರದ ದರ್ಶನ ಪಡೆದಿದ್ದಾರೆ.

Shwetha M