ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸ್ಪರ್ಧಿಸುತ್ತಾರಾ? – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸ್ಪರ್ಧಿಸುತ್ತಾರಾ? – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ. ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂಧ್ರ ಸಿದ್ದರಾಮಯ್ಯ ಸ್ಪರ್ಧೆ ನಡೆಸುತ್ತಿದ್ದಾರೆ ಎಂಬ ವದಂತಿ ಜೋರಾಗಿಯೇ ಹಬ್ಬುತ್ತಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ‘ನಾನಾಗಲಿ, ನನ್ನ ಮಗ ಯತೀಂದ್ರನಾಗಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದ ಸಿಎಂ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ಕೊಹ್ಲಿ ಪಾದ ಮುಟ್ಟಿ ತಬ್ಬಿಕೊಂಡ ಅಭಿಮಾನಿ – ಭದ್ರತೆ ಉಲ್ಲಂಘಿಸಿದ ಅಭಿಮಾನಿಗೆ ಕಾನೂನು ಸಂಕಷ್ಟ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ತಮ್ಮ ವಿರುದ್ಧ ಸ್ಪರ್ಧಿಸುತ್ತಾರೆ ಅಂತ ಸಂಸದ ಪ್ರತಾಪ್​ ಸಿಂಹ ಅವರಿಗೆ ಭಯ ಶುರುವಾಗಿದೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ.  ಯಾವುದೇ ವೈಯಕ್ತಿಕ ಆಯ್ಕೆಯನ್ನು ಆಧರಿಸಿ ಅಲ್ಲ. ನಾನು ಅಥವಾ ಯತೀಂದ್ರ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇವೆ ಎಂದೂ ಹೇಳಿಲ್ಲ ಎಂದು ಹೇಳಿದರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವೀಕ್ಷಕರಾಗಿ ರಾಜ್ಯ ನಗರಾಭಿವೃದ್ಧಿ ಸಚಿವ ಸುರೇಶ ಬಿಎಸ್ (ಬೈರತಿ) ಅವರನ್ನು ನೇಮಿಸಲಾಗಿದೆ. ಸುರೇಶ್ ಅವರು ಸಂಭಾವ್ಯ ಅಭ್ಯರ್ಥಿಗಳ ವರದಿಯನ್ನು ಸಲ್ಲಿಸಿದ್ದು, ಅದರ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಪ್ರತಾಪ್ಸಿಂಹ ಹೇಳಿದ್ದೇನು?

ಯತೀಂದ್ರ ಸ್ಪರ್ಧೆ ಮಾಡಿದರೆ ಸಿಎಂ ಪುತ್ರ-ಪತ್ರಕರ್ತನ ನಡುವೆ ಫೈಟ್ ನಡೆಯುತ್ತದೆ. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಅವರು ಎದುರಾಳಿಯಾದರೆ ಒಳ್ಳೆಯದು ಎಂದು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದರು.

Shwetha M