ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಕೌಂಟ್‌ ಡೌನ್‌ – ಭದ್ರವಾಗಲಿದೆ 14 ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ!

ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಕೌಂಟ್‌ ಡೌನ್‌ – ಭದ್ರವಾಗಲಿದೆ 14 ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ!

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಮೇ 7ರಂದು ಮಂಗಳವಾರ ನಡೆಯಲಿದೆ. ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದೆ. ಕರ್ನಾಟಕದಲ್ಲಿ ಇದು ಎರಡನೇ ಹಂತದ ಮತದಾನವಾಗಿದೆ. ಮೊದಲ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಇದೀಗ ಮೂರನೇ ಹಂತದಲ್ಲಿ 11 ರಾಜ್ಯಗಳ 92 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಹಂತದಲ್ಲಿ ಒಟ್ಟು 1,300 ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದು, ಅವರಲ್ಲಿ ಸುಮಾರು 120 ಮಹಿಳೆಯರಾಗಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6ರ ವರೆಗೆ ನಡೆಯಲಿದೆ.

ಇದನ್ನೂ ಓದಿ: ಹಾಸನ ಪೆನ್‌ಡ್ರೈವ್‌‌ ಕೇಸ್‌ – ಪ್ರಜ್ವಲ್ ರೇವಣ್ಣ​ ಕರೆತರಲು ವಿದೇಶಕ್ಕೆ ಹಾರಿದ ಅಧಿಕಾರಿಗಳು?

ಎರಡನೇ ಹಂತದ ಚುನಾವಣೆಯಲ್ಲಿ ರಾಜ್ಯದ ಕೆಲ ಕ್ಷೇತ್ರಗಳು ಭಾರಿ ಸದ್ದು ಮಾಡುತ್ತಿವೆ. ಬೆಳಗಾವಿಯಲ್ಲಿ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಮತ್ತು ಕಾಂಗ್ರೆಸ್‌ನಿಂದ ಮೃಣಾಲ್ ಸ್ಪರ್ಧಿಸುತ್ತಿದ್ದರೆ, ಉತ್ತರ ಕನ್ನಡದಲ್ಲಿ ಅಂಜಲಿ ನಿಂಬಾಳ್ಕರ್ ಕಥ ಅಭ್ಯರ್ಥಿಯಾಗಿದ್ದು, ಬಿಜೆಪಿಯಿಂದ ವಿಶ್ವೇಶ್ವರ್ ಹೆಗಡೆ ಕಾಗೇರಿ ಸ್ಪರ್ಧಿಸುತ್ತಿದ್ದಾರೆ. ಇನ್ನು ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಹಾಲಿ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್‌ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್‌ ಕಣಕ್ಕಿಳಿದಿದ್ದರೆ, ಬಿಜೆಪಿಯಿಂದ ಹಾಲಿ ಸಂಸದ ಜಿಎಂ ಸಿದ್ದೇಶ್ವರ್‌ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್‌ ಸ್ಪರ್ಧಿಸಿದ್ದಾರೆ. ಹೈವೋಲ್ಟೇಜ್‌ ಕಣವಾದ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ  ಬಿಜೆಪಿ ಅಭ್ಯರ್ಥಿಯಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ, ಕಾಂಗ್ರೆಸ್‌  ಗೀತಾ ಶಿವರಾಜ್‌ ಕುಮಾರ್ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ನಡುವೆ ಹೈವೋಲ್ಟೇಜ್ ಜಿದ್ದಾಜಿದ್ದಿ ನಡೆಯುತ್ತಿದೆ. ಜೊತೆಗೆ ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪರ್ಧಿಸುತ್ತಿದ್ದಾರೆ.  ಇವರೆಲ್ಲರ ಭವಿಷ್ಯ ಮಂಗಳವಾರ  ನಿರ್ಧಾರವಾಗಲಿದೆ.

ಮಂಗಳವಾರ ಉತ್ತರ ಕರ್ನಾಟಕ ಭಾಗದಲ್ಲೂ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.  ಈ ಮಧ್ಯೆ ಭಾರತೀಯ ಹವಾಮಾನ ಇಲಾಖೆ ಮತದಾನ ನಡೆಯುವ ಪ್ರದೇಶಗಳಲ್ಲಿ ಹೀಟ್‌ವೇವ್ ಎಚ್ಚರಿಕೆಯನ್ನು ನೀಡಿದೆ. ಉತ್ತರ ಕರ್ನಾಟಕದ ಒಳಭಾಗಗಳಲ್ಲಿ ತಾಪಮಾನ 42-44 ಡಿಗ್ರಿ ಸೆಲ್ಸಿಯಸ್ ನಷ್ಟಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮತದಾನ ನಡೆಯಲಿರುವ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ರೆಡ್ ಹೀಟ್ ವೇವ್ ಅಲರ್ಟ್ ನೀಡಿದೆ. ಬಿಸಿಗಾಳಿ ಎದುರಿಸಲು ಚುನಾವಣಾ ಆಯೋಗ ಮತದಾರರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಿದೆ.

Shwetha M