ಅತ್ತಿಬೆಲೆ ಅಗ್ನಿ ದುರಂತದಿಂದ ಎಚ್ಚೆತ್ತುಕೊಂಡ ಸರ್ಕಾರ! – ಇನ್ನು ಮುಂದೆ ಈ ಹಬ್ಬಗಳಲ್ಲಿ ಪಟಾಕಿ ನಿಷೇಧ!

ಅತ್ತಿಬೆಲೆ ಅಗ್ನಿ ದುರಂತದಿಂದ ಎಚ್ಚೆತ್ತುಕೊಂಡ ಸರ್ಕಾರ! – ಇನ್ನು ಮುಂದೆ ಈ ಹಬ್ಬಗಳಲ್ಲಿ ಪಟಾಕಿ ನಿಷೇಧ!

ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋದಾಮು ಅಗ್ನಿ ದುರಂತದಲ್ಲಿ ತಮಿಳುನಾಡಿನ 14 ಜನರು ಸಜೀವ ದಹನವಾಗಿದ್ದರು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇನ್ನು ಮುಂದೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದೆ.

ಈ ಬಗ್ಗೆ ಸುದ್ದಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,  ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಇನ್ನುಳಿದಂತೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: ರಸ್ತೆಯಲ್ಲಿ ಬಿದ್ದಿದ್ದ 10 ರೂಪಾಯಿ ನೋಟಿನ ಆಸೆಗೆ ಲಕ್ಷ ಕಳೆದುಕೊಂಡ ವ್ಯಕ್ತಿ! –ಯಾಮಾರಿಸಿದ ಖತರ್ನಾಕ್‌ ಕಳ್ಳ!

ದೀಪಾವಳಿ ಸಮೀಪವೇ ಬರುತ್ತಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗುತ್ತಿದ್ದೇವೆ. ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಮಾಲೀನ್ಯಕಾರ ಪಟಾಕಿಗೆ ಸಿಡಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವಂತೆ ಸೂಚಿಸಲಾಗಿದೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪಟಾಕಿ ಅಗ್ನಿ ದುರಂತ ತಡೆ ಸಂಬಂಧ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಹೇಳಿದ ಸಿದ್ದರಾಮಯ್ಯ, ರಾಮಸ್ವಾಮಿ ರೆಡ್ಡಿ ಎಂಬಾತ ಪಟಾಕಿ ಮಾರಾಟಕ್ಕೆ ಅನುಮತಿ ಪಡೆದಿದ್ದ. ಗೋಡೌನ್​ನಲ್ಲಿ ಮಿತಿ ಮೀರಿ ಪಟಾಕಿ ಸಂಗ್ರಹಕ್ಕೆ ಅನುಮತಿ ಪಡೆದಿರಲಿಲ್ಲ. ಹೀಗಾಗಿ ತಹಶೀಲ್ದಾರ್​, ಇನ್ಸ್​​ಪೆಕ್ಟರ್​​, ಅಗ್ನಿಶಾಮಕ ಅಧಿಕಾರಿಯನ್ನು ಅಮಾನತು ಮಾಡಲು ಆದೇಶಿಸಲಾಗಿದ್ದು, ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ ಎಂದರು.

ಪಟಾಕಿ ಮಾರಾಟ ಪರವಾನಗಿ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ. ಒಮ್ಮೆ ಪರವಾನಗಿ ಪಡೆದರೆ 5 ವರ್ಷದ ಬಳಿಕ ನವೀಕರಣಕ್ಕೆ ಅವಕಾಶವಿತ್ತು. ಇನ್ಮುಂದೆ ಪ್ರತಿವರ್ಷ ಪಟಾಕಿ ಮಾರಾಟ ಪರವಾನಗಿ ನವೀಕರಣಗೊಳಿಸಬೇಕು. ಆದೇಶ ಪಾಲನೆ ಮಾಡದಿದ್ದರೆ ಕಠಿಣ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ಕೊಟ್ಟಿದ್ದಾರೆ.

Shwetha M