ಕಾವೇರಿ ನದಿಯಲ್ಲಿ ಪ್ರಥಮ ದರ್ಜೆ ಕಾಂಟ್ರಾಕ್ಟರ್ ಶವವಾಗಿ ಪತ್ತೆ – ಕೊ*ಲೆನಾ? ಆತ್ಮ*ಹತ್ಯೆನಾ?

ಮಂಡ್ಯ ಜಿಲ್ಲೆಯಲ್ಲಿ ಪ್ರಥಮ ದರ್ಜೆ ಕಾಂಟ್ರಾಕ್ಟರ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಆತಂಕಕ್ಕೆ ಕಾರಣವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಹುಣಸನ ಹಳ್ಳಿಯ ನಿವಾಸಿಯಾದ 27 ವರ್ಷದ ಪವನ್ ಮೃತ ಯುವಕ. ಈ ಯುವಕನ ಶವ ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದು, ಈ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟಿಸಿದೆ.
ಇದನ್ನೂ ಓದಿ: ಕೊರೊನಾ ಟೈಂನಲ್ಲಿ ಕಸ್ಟಡಿಯಲ್ಲಿ ತಂದೆ- ಮಗನ ಕೊ*ಲೆ – ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ
ಪವನ್ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಾಂಟ್ರಾಕ್ಟರ್ ಆಗಿದ್ದು, ನಾಲ್ಕು ದಿನಗಳ ಹಿಂದೆ ಕೆಲಸ ಇದೆ, ಇಂದು ಮನೆಗೆ ಬರುವುದಿಲ್ಲ ಎಂದು ಕುಟುಂಬಕ್ಕೆ ತಿಳಿಸಿ ಹೊರಟಿದ್ದ. ಆದರೆ ನಂತರ ಆತ ಮನೆಗೆ ವಾಪಸ್ ಆಗಿಲ್ಲ. ಅವನ ಮೊಬೈಲ್ ಸ್ವಿಚ್ ಆಫ್ ಆಗಿರುವುದರ ಜೊತೆಗೆ ಸಾಮಾಜಿಕ ಜಾಲತಾಣ ಖಾತೆಗಳೂ ಡಿ-ಆಕ್ಟಿವ್ ಆಗಿದ್ದವು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇದೀಗ ನಿನ್ನೆ ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ನದಿಯಲ್ಲಿ ಪವನ್ ಅವರ ಮೃತದೇಹ ಪತ್ತೆಯಾಗಿದ್ದು, ದೇಹದ ಮೇಲೆ ಗಾಯಗಳಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಇದು ಕೊಲೆ ಆಗಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.ಈ ಘಟನೆ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದ್ದು, ಪವನ್ ಸಾವಿನ ಸತ್ಯಾಸತ್ಯತೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನೋಡಿರಿ

