ಬಿಎಸ್‌ವೈ ಸಮ್ಮುಖದಲ್ಲಿ ಸುಮಲತಾ ಅಂಬರೀಶ್‌ ಬಿಜೆಪಿ ಸೇರ್ಪಡೆ

ಬಿಎಸ್‌ವೈ ಸಮ್ಮುಖದಲ್ಲಿ ಸುಮಲತಾ ಅಂಬರೀಶ್‌ ಬಿಜೆಪಿ ಸೇರ್ಪಡೆ

ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವಾಭಿಮಾನದ ಹೆಸರಿನಲ್ಲಿ ಪಕ್ಷೇತರವಾಗಿ ನಿಂತು ಗೆದ್ದ ಸುಮಲತಾ‌‌ ಅಂಬರೀಶ್ ಇವತ್ತು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಪತ್ರ ನೀಡಿ ಸುಮಲತಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಇದನ್ನೂ ಓದಿ: ಈಶ್ವರಪ್ಪರನ್ನ ಭೇಟಿಯಾಗದೆಯೇ 1 ಕಲ್ಲಲ್ಲಿ 2 ಹಕ್ಕಿ ಹೊಡೆದ್ರಾ ಶಾ?

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಸುಮಲತಾ ಬಿಜೆಪಿಗೆ ಸೇರ್ಪಡೆಯಾದ್ರು. ಬಿಜೆಪಿ ಸೇರ್ಪಡೆಗೂ ಮುನ್ನ ಸುಮಲತಾ ಅಂಬರೀಶ್​ ಕಂಠೀರವ ಸ್ಡುಡಿಯೋದ ಆವರಣದಲ್ಲಿರುವ ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸಲಿದ್ರು.

ಪಕ್ಷ ಸೇರ್ಪಡೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್​, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ ನನಗೆ ಪ್ರೇರಣಾದಾಯಕವಾಗಿದೆ. ಪ್ರಧಾನಿ ಮೋದಿಯವರು ನುಡಿದಂತೆ ನಡೆಯುತ್ತಿದ್ದಾರೆ. ಅವರ ವಿಕಸಿತ ಭಾರತ ಕನಸು ನನಸಾಗಬೇಕು ಅಂತಾ ಹೇಳಿದ್ದಾರೆ. ಇನ್ನು ಸುಮಲತಾ ಅಂಬರೀಶ್‌ ಮೈಸೂರು ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಇಳಿಯಲಿದ್ದಾರೆ. ಸುಮಲತಾರನ್ನು ಸ್ಟಾರ್ ಕ್ಯಾಂಪೇನರ್ ಮಾಡಿ ಪ್ರಚಾರ ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ ಅಂತಾ ಹೇಳಲಾಗುತ್ತಿದೆ.

Shwetha M