ಏಷ್ಯಾದ ಅತಿದೊಡ್ಡ ಹಣ್ಣು, ತರಕಾರಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ!

ಏಷ್ಯಾದ ಅತಿದೊಡ್ಡ ಹಣ್ಣು, ತರಕಾರಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ!

ನವದೆಹಲಿ: ದೆಹಲಿಯ ಆಜಾದ್‌ಪುರದಲ್ಲಿರುವ ಏಷ್ಯಾದ ಅತೀ ದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ಭೀರಕ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಆಜಾದ್‌ಪುರದಲ್ಲಿರುವ ಏಷ್ಯಾದ ಅತೀ ದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆ ಏಷ್ಯಾದ ಅತೀ ದೊಡ್ಡ ಮಾರುಕಟ್ಟೆಯಾಗಿದೆ. ಮೂಲಗಳ ಪ್ರಕಾರ, ಶುಕ್ರವಾರ ಮಾರುಕಟ್ಟೆಯ ಟೊಮೆಟೊ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಹೊತ್ತಲ್ಲಿ ಬೆಂಕಿ ಹತ್ತಾರು ಮಳಿಗೆಗಳಿಗೆ ವ್ಯಾಪಿಸಿದೆ.

ಇದನ್ನೂ ಓದಿ: ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ! – ವಾರಣಾಸಿಗೆ ಹೊರಟಿದ್ದ ವಿಮಾನ ತುರ್ತು ಭೂಸ್ಪರ್ಶ

ಸುಮಾರು 11 ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಿವೆ. ಬೆಂಕಿ ಅವಘಡದಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಜೊತೆಗೆ ಸಾವು-ನೋವು ಉಂಟಾಗಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿದ್ದಾರೆ.

Shwetha M