ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ – ಅಮರನಾಥಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಚಿವೆ ಶೋಭಾ ಕರಂದ್ಲಾಜೆ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ – ಅಮರನಾಥಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಚಿವೆ ಶೋಭಾ ಕರಂದ್ಲಾಜೆ

ಶ್ರೀನಗರ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ಅಮರನಾಥಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಬೇಕು ಅಂತಾ ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ಸತಃ ಶೋಭಾ ಕರಂದ್ಲಾಜೆ ಅವರೇ ಟ್ವೀಟ್‌ ಮಾಡಿದ್ದಾರೆ. ತಾವು ಅಮರನಾಥಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿರುವ ವಿಡಿಯೋಗಳನ್ನು ಟ್ವೀಟ್‌ ಮಾಡಿದ್ದಾರೆ. ಅಮರನಾಥ ದರ್ಶನ ಪಡೆದು ಧನ್ಯಳಾಗಿದ್ದೇನೆ. ದೇಶವಾಸಿಗಳ ಯೋಗಕ್ಷೇಮ ಮತ್ತು ನರೇಂದ್ರ ಮೋದಿ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಮತ್ತೆ ಪ್ರಧಾನಿಯಾಗಬೇಕು ಎಂದು ಪ್ರಾರ್ಥಿಸಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:  ದೇವರೇ.. ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು..! – ದೇವಿ ಮುಂದೆ ಭಕ್ತನ ಹೀಗೊಂದು ಬೇಡಿಕೆ

ಶ್ರೀ ಅಮರನಾಥದಲ್ಲಿರುವ ಪವಿತ್ರ ಶಿವಲಿಂಗದ ದರ್ಶನ ಪಡೆದೆ. ನನ್ನ ಯಾತ್ರೆಗೆ ಸಹಕಾರಿಯಾದ ಅಮರನಾಥ ದೇಗುಲ ಮಂಡಳಿಯ ಎಲ್ಲಾ ಸಿಬ್ಬಂದಿ ಮತ್ತು ಭದ್ರತಾ ತಂಡಕ್ಕೆ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸಿದ್ದೇನೆ. ಎಲ್ಲರ ಸುಗಮ ಯಾತ್ರೆಗೆ ಅನುವು ಮಾಡಿಕೊಟ್ಟಿರುವ ಮನೋಜ್‌ ಸಿನ್ಹಾ ಅವರಿಗೆ ವಂದನೆಗಳು ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

suddiyaana