ವೈಷ್ಣವಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಮಿಲನ ಧಾರಾವಾಹಿಯ ನಟ ಪ್ರಶಾಂತ್ ಭಾರದ್ವಜ್

ವೈಷ್ಣವಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಮಿಲನ ಧಾರಾವಾಹಿಯ ನಟ ಪ್ರಶಾಂತ್ ಭಾರದ್ವಜ್

ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಮಿಲನ ಧಾರಾವಾಹಿ ಬಹಳಷ್ಟು ಪ್ರಖ್ಯಾತಿ ಪಡೆದಿತ್ತು. ಸೀರಿಯಲ್ ನಲ್ಲಿ ಸಮರ್ಥ್ ಹೆಸರಿನಲ್ಲಿ ನಾಯಕನ ಪಾತ್ರ ಮಾಡಿದ್ದ ಪ್ರಶಾಂತ್  ಭಾರದ್ವಜ್ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ವೈಷ್ಣವಿ (Vaishnavi) ಜೊತೆ ಪ್ರಶಾಂತ್ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಹ್ಯಾಪಿ ಅಭಿಮಾನಿಗಳ ಸಂಭ್ರಮಕ್ಕೆ ಕಾರಣರಾಗಿದ್ದಾರೆ.

ಇದನ್ನೂ ಓದಿ : ಮಗಳ ಮದುವೆ ಮಾಡಿಸಿದ್ದ ಫೈವ್ ಸ್ಟಾರ್ ಹೊಟೇಲ್‌ನಲ್ಲೇ ದಂಪತಿ ಆತ್ಮಹತ್ಯೆ – ಡೆತ್‌ ನೋಟ್‌ನಲ್ಲಿ ಬಯಲಾಯ್ತು ಸಾವಿನ ರಹಸ್ಯ!

ಪ್ರಶಾಂತ್ ಭಾರದ್ವಾಜ್ ಅವರು ವೈಷ್ಣವಿ ಮಧುಸೂದನ್ ಅವರ ಜೊತೆ ನಿಶ್ಚಿತಾರ್ಥ (Engaged) ಮಾಡಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ ಜೋಡಿಗೆ ಎಲ್ಲರೂ ಶುಭಕೋರುತ್ತಿದ್ದಾರೆ. ಒಲವೇ ಜೀವನ ಸಾಕ್ಷಾತ್ಕಾರ’, ‘ಆತ್ಮ ಬಂಧನ’, ‘ಯಜಮಾನಿ’ ಧಾ     ವಾಹಿ ಸೇರಿದಂತೆ ಸಾಕಷ್ಟು ಟಿವಿ ಕಾರ್ಯಕ್ರಮಗಳಲ್ಲೂ ಪ್ರಶಾಂತ್ ಕಾಣಿಸಿಕೊಂಡಿದ್ದಾರೆ. ತಮ್ಮದೇ ಆದ ಅಭಿಮಾನಿ ವರ್ಗವನ್ನೂ ಅವರು ಹೊಂದಿದ್ದಾರೆ. ಪ್ರಶಾಂತ್ ಅವರಿಗೆ ಈಗ ಪರಭಾಷೆಯಲ್ಲಿ ಕೂಡ ಬೇಡಿಕೆ ಇದ್ದು, ಅಲ್ಲೂ ಆ್ಯಕ್ಟಿವ್ ಆಗಿದ್ದಾರೆ. ಮಿಲನ‌ ಸೀರಿಯಲ್ ಮೂಲ ಬಣ್ಣದ ಬದುಕಿಗೆ ಎಂಟ್ರಿ ಕೊಟ್ಟ ಇದೀಗ ಹೊಸ ಬಾಳಿಗೆ ಕಾಲಿಡಲು ತಯಾರಿ ನಡೆಸಿದ್ದಾರೆ. ಸದ್ಯಕ್ಕೆ ನಿಶ್ಚಿತಾರ್ಥ ನೆರವೇರಿದ್ದು, ಸದ್ಯದಲ್ಲೇ ಮದುವೆ ಬಗ್ಗೆ ಅಪ್ ಡೇಟ್ ಹಂಚಿಕೊಳ್ಳಲಿದ್ದಾರೆ. ನೆಚ್ಚಿನ ನಟನೆ ಹೊಸ ಬದುಕಿಗೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.

suddiyaana