ಸಿಎಂ ಆದ ದಿನವೇ 20 ಸಾವಿರ ಬುಲ್ಡೋಜರ್‌ ಖರೀದಿಸುವೆ! – ಯತ್ನಾಳ್‌ ಹೀಗೆ ಹೇಳಿದ್ದು ಯಾಕೆ ಗೊತ್ತಾ?

ಸಿಎಂ ಆದ ದಿನವೇ 20 ಸಾವಿರ ಬುಲ್ಡೋಜರ್‌ ಖರೀದಿಸುವೆ! – ಯತ್ನಾಳ್‌ ಹೀಗೆ ಹೇಳಿದ್ದು ಯಾಕೆ ಗೊತ್ತಾ?

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಿಎಂ ಆಗುವ  ಆಸೆಯನ್ನು ಮತ್ತೆ ಬಿಚ್ಚಿಟ್ಟಿದ್ದಾರೆ. ನಾನು ಸಿಎಂ ಆದ ದಿನವೇ 20 ಸಾವಿರ ಬುಲ್ಡೋಜರ್‌ ಖರೀದಿ ಮಾಡಲು ಅನುಮತಿ ನೀಡುವೆ ಅಂತಾ ಯತ್ನಾಳ್‌ ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕೆ ಕೊನೆಗೂ ಬರ ಪರಿಹಾರದ ಹಣ ಬಿಡುಗಡೆ – ಪರಿಹಾರ ಎಷ್ಟು ಕೋಟಿ ಗೊತ್ತಾ?

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಪರ ಪ್ರಚಾರ ಮಾಡುವ ವೇಳೆ ಸಿಎಂ ಆಗುವ ಕನಸನ್ನು ಬಿಚ್ಚಿಟ್ಟಿದ್ದಾರೆ. ತಾನು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ದಿನದಂದೇ ಭಯೋತ್ಪಾದಕರು ಹಾಗೂ ಮತಾಂಧ ಸಂಘಟನೆಯವರ ಮನೆಗಳನ್ನು ಕೆಡವಲು 20 ಸಾವಿರ ಬುಲ್ಡೋಜರ್‌ ಖರೀದಿಗೆ ಅನುಮತಿ ನೀಡುವೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ನೇತೃತ್ವದ ಸರಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಾಗಿದೆ. ಹುಬ್ಬಳ್ಳಿ ನೇಹಾ ಹಿರೇಮಠ ಅವರ ಹತ್ಯೆಯನ್ನು ಗೃಹ ಸಚಿವರು, ಮುಖ್ಯಮಂತ್ರಿಗಳು ಅತ್ಯಂತ ಹಗುರವಾಗಿ ಕಂಡರು. ಕೇವಲ ಮುಸ್ಲಿಂ ತುಷ್ಠೀಕರಣ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‌ ಭಾರತವನ್ನು ಪಾಕಿಸ್ತಾನ ಮಾಡಲು ಹೊರಟಿದೆ. ಅದೇ ಕಾರಣಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಎಲ್ಲೆಡೆ ಪಾಕಿಸ್ತಾನ ಧ್ವಜಗಳು ಹಾರಾಡುತ್ತವೆ. ಕ್ರೈಂಗಳು ಹಾಗೂ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗುತ್ತವೆ. ಆದರೆ, ಪ್ರಧಾನಿ ಮೋದಿ 10 ವರ್ಷದ ಆಡಳಿತದಲ್ಲಿ ದೇಶದ ವರ್ಚಸ್ಸು ಹೆಚ್ಚಿಸುವುದರ ಜತೆಗೆ ಮುಂದುವರಿದ ರಾಷ್ಟ್ರಗಳು ಸಹ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ ಎಂದು ಹೇಳಿದರು.

ಭಾರತವನ್ನು ಪಾಕಿಸ್ತಾನ ಮಾಡಲು ಹೊರಟಿರುವ ಕಾಂಗ್ರೆಸ್‌ ಪಕ್ಷದಿಂದ ಮುಂಬರುವ ದಿನಗಳು ದುಬಾರಿಯಾಗಲಿವೆ. ತಾವು ಹಾಕುವ ಒಂದು ಮತವೂ ಒಬ್ಬ ಭಯೋತ್ಪಾದಕನನ್ನು ಸಂಹಾರ ಮಾಡಲಿದೆ ಎಂದು ತಿಳಿಸಿದರು.

Shwetha M

Leave a Reply

Your email address will not be published. Required fields are marked *